Advertisement

Congress ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿ: ಸಿಎಂ

09:11 PM Mar 06, 2024 | Team Udayavani |

ಬೆಳಗಾವಿ: ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ರೈತರಿಗೆ ಅನುಕೂಲವಾಗುವಂತೆ ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ತರಲಾಗುವದು ಎಂದು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

Advertisement

ಸುವರ್ಣ ವಿಧಾನಸೌಧದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಬೆಳಗಾವಿ ವಿಭಾಗದ ಏಳು ಜಿಲ್ಲೆಗಳ ರೈತರಿಗೆ ಕೃಷಿ ಸಲಕರಣೆಗಳನ್ನು ವಿತರಿಸಿ ಮಾತನಾಡಿ, ಕೃಷಿ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರುವದು ನಮ್ಮ ಸರ್ಕಾರದ ಮುಖ್ಯ ಉದ್ದೇಶ. ಈ ನಿಟ್ಟಿನಲ್ಲಿ ರೈತರ ಬೆಂಬಲಕ್ಕೆ ನಮ್ಮ ಸರಕಾರ ಸದಾ ನಿಲ್ಲಲಿದೆ ಎಂದರು.

ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ಇದುವರೆಗೆ ಕೇಂದ್ರ ಸರಕಾರ ಒಂದು ನಯಾ ಪೈಸೆ ಪರಿಹಾರ ನೀಡಿಲ್ಲ. ನಾವು ಹಲವಾರು ಬಾರಿ ಕೇಂದ್ರ ಸಚಿವರು ಪ್ರಧಾನಿ ಅವರನ್ನು ಭೆಟ್ಟಿ ಮಾಡಿ ಮನವಿ ಮಾಡಿದರೂ ನಮ್ಮ ಮನವಿಗೆ ಸ್ಪಂದಿಸಿಲ್ಲ ಎಂದು ಕಿಡಿ ಕಾರಿದರು.

ರೈತರು ಸಮಗ್ರ ಕೃಷಿ ಬೇಸಾಯ ಅಳವಡಿಸಿಕೊಳ್ಳಬೇಕು. ಇದಕ್ಕೆ ನಮ್ಮ ಸರಕಾರ ಶಕ್ತಿಯಾಗಿ ನಿಲ್ಲಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next