Advertisement

Congress ಸೋತರೆ ರಾಹುಲ್‌ ಹಿಂದೆ ಸರಿಯುವುದು ಉತ್ತಮ: ಪ್ರಶಾಂತ್‌ ಕಿಶೋರ್‌

12:48 AM Apr 08, 2024 | Team Udayavani |

ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನಿರೀಕ್ಷಿತ ಫ‌ಲಿತಾಂಶ ದೊರೆಯದಿದ್ದರೆ, ಪಕ್ಷದ ಹಿತದೃಷ್ಟಿಯಿಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಿಂದೆ ಸರಿಯುವುದು ಉತ್ತಮ ಎಂದು ರಾಜಕೀಯ ವ್ಯೂಹರಚನೆಕಾರ ಪ್ರಶಾಂತ್‌ ಕಿಶೋರ್‌ ಸಲಹೆ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, “ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್‌ಗೆ ಗೆಲುವು ದೊರಕಿಸಿಕೊಡಲು ಸಾಧ್ಯವಾಗದಿದ್ದರೂ, ರಾಹುಲ್‌ ಹಿಂದಕ್ಕೆ ಸರಿಯುತ್ತಿಲ್ಲ ಅಥವಾ ಬೇರೆಯವರಿಗೆ ಪಕ್ಷದ ಚುಕ್ಕಾಣಿ ನೀಡುತ್ತಿಲ್ಲ. ನನ್ನ ಪ್ರಕಾರ ಇದು ಪ್ರಜಾಪ್ರಭುತ್ವ ವಿರೋಧಿ’ ಎಂದು ಅಭಿಪ್ರಾಯಪಟ್ಟಿದ್ದಾರೆ.

Advertisement

300+ ಸ್ಥಾನಗಳಲ್ಲಿ ಬಿಜೆಪಿಗೆ ಗೆಲುವು!
“ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಕಿಶೋರ್‌ ಹೇಳಿದ್ದಾರೆ. “ತೆಲಂಗಾಣ, ಒಡಿಶಾ, ಪಶ್ಚಿಮ ಬಂಗಾಲ, ತಮಿಳುನಾಡಿನಲ್ಲಿ ಈ ಬಾರಿ ಹೆಚ್ಚು ಕ್ಷೇತ್ರಗಳು ಬಿಜೆಪಿ ತೆಕ್ಕೆಗೆ ಬರಲಿವೆ. ಪಶ್ಚಿಮ ಬಂಗಾಲದಲ್ಲಿ ನಂ.1 ಪಕ್ಷವಾಗಿ ಬಿಜೆಪಿ ಹೊರಹೊಮ್ಮಲಿದೆ’ ಎಂದು ಭವಿಷ್ಯ ನುಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next