Advertisement

ಸಿಎಎ ವಿರೋಧಿ ಹಿಂಸಾಚಾರದ ಹಿಂದೆ ಕಾಂಗ್ರೆಸ್ ಇಲ್ಲದಿದ್ದರೆ,ಅದನ್ನು ಏಕೆ ಖಂಡಿಸಲಿಲ್ಲ?: ನಡ್ಡಾ

10:00 AM Jan 04, 2020 | Mithun PG |

ವಡೋದರಾ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹಿಂಸಾಚಾರದ ಹಿಂದೆ ಕಾಂಗ್ರೆಸ್ ಇಲ್ಲದಿದ್ದರೆ, ಅವರು ಅದನ್ನು ಏಕೆ ಖಂಡಿಸಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಶ್ನಿಸಿದ್ದಾರೆ.

Advertisement

ವಡೋದರಾದಲ್ಲಿ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದ ಹಿಂದೆ ನಾವು ಇಲ್ಲ ಎಂದು ಕಾಂಗ್ರೆಸ್ ಹೇಳುತ್ತದೆ, “ನೀವು ಅದರ ಹಿಂದೆ ಇಲ್ಲದಿದ್ದರೆ, ಇಷ್ಟು ದಿನಗಳು ಕಳೆದರೂ, ಆ ಘಟನೆಯನ್ನು ಏಕೆ ಖಂಡಿಸಲಿಲ್ಲ?  ಎಂದು ಕಿಡಿಕಾರಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಜನರಿಗೆ ಸಮರ್ಪಕ ಮಾಹಿತಿ ನೀಡಲು ಬಿಜೆಪಿ ಪಕ್ಷವು ವಿಚಾರ ಸಂಕಿರಣಗಳನ್ನು ನಿರಂತರವಾಗಿ ಆಯೋಜಿಸುವ ಯೋಜನೆ ಹಮ್ಮಿಕೊಂಡಿದೆ. ಮಾತ್ರವಲ್ಲದೆ ಸಿಎಎ ಕಾನೂನಿನ ಪರವಾಗಿ  ಜನರ ಬೆಂಬಲ ಪಡೆಯಲು ಟೋಲ್ ಫ್ರೀ ಸಂಖ್ಯೆಯನ್ನು ಕೂಡ ಆರಂಭಿಸಿದೆ ಎಂದು ಇದೆ ವೇಳೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next