Advertisement

BY Election:ಡಿಕೆಸು ಸ್ಪರ್ಧಿಸುವುದಿಲ್ಲ ಎಂದಾದರೆ ನನಗೇ ಟಿಕೆಟ್‌ ನೀಡಿ: ಎಂ.ಸಿ. ಅಶ್ವತ್ಥ್

12:06 AM Oct 19, 2024 | Team Udayavani |

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿ.ಕೆ. ಸುರೇಶ್‌ ಸ್ಪರ್ಧಿಸುವುದಿಲ್ಲ ಎಂದಾದಲ್ಲಿ ನನಗೇ ಟಿಕೆಟ್‌ ನೀಡಿ ಎಂದು ಮಾಜಿ ಶಾಸಕ ಎಂ.ಸಿ. ಅಶ್ವತ್ಥ್ ಮನವಿ ಮಾಡಿದ್ದಾರೆ.

Advertisement

ಗುರುವಾರವಷ್ಟೇ ಕೊಲ್ಲೂರಿನಲ್ಲಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್‌ ಗೆಲ್ಲಬೇಕು ಎಂದು ಚಂಡಿಕಾ ಹೋಮ ಮಾಡಿಸಿದ್ದ ಎಂ.ಸಿ. ಅಶ್ವತ್ಥ್ ಶುಕ್ರವಾರ ಡಿಸಿಎಂ ಡಿ.ಕೆ. ಶಿವಕುಮಾರ್‌ ಮನೆಗೆ ತೆರಳಿ ಹೋಮದ ಪ್ರಸಾದ ನೀಡಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಡಿ.ಕೆ. ಸುರೇಶ್‌ ಅಭ್ಯರ್ಥಿಯಾಗಬೇಕು ಎಂದು ಕ್ಷೇತ್ರದ ಕಾರ್ಯಕರ್ತರು ಬಯಸುತ್ತಿದ್ದಾರೆ. ಅವರಿಗೆ ಟಿಕೆಟ್‌ ನೀಡಿದರೆ ನಾವೆಲ್ಲಾ ಅವರ ಪರವಾಗಿ ಕೆಲಸ ಮಾಡುತ್ತೇವೆ. ಇಲ್ಲವಾದಲ್ಲಿ ನನಗೇ ಟಿಕೆಟ್‌ ನೀಡಿ ಎಂದಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ್ದೇನೆ. ನಾನು ಚುನಾವಣೆ ಎದುರಿಸಲು ಸಮರ್ಥನಿದ್ದೇನೆ ಎಂದು ತಿಳಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next