Advertisement

ಸಿಎಂ ಬಗ್ಗೆ ಮಾತನಾಡಿದರೆ ಸುಖಾಸುಮ್ಮನೆ ವಿವಾದವಾಗುತ್ತದೆ: ಸಚಿವ ಯೋಗೇಶ್ವರ್

12:23 PM Jun 06, 2021 | Team Udayavani |

ರಾಮನಗರ: ಸಿಎಂ ಬಿ.ಎಸ್.ಯಡಿಯೂರಪ್ಪ ಬಗ್ಗೆ ಮಾತನಾಡಿದರೆ ಸುಖಾಸುಮ್ಮನೆ ವಿವಾದವಾಗುತ್ತದೆ. ನನ್ನನ್ನು ಜಾಸ್ತಿ ಮಾತನಾಡಿಸಬೇಡಿ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು.

Advertisement

ಚನ್ನಪಟ್ಟಣದಲ್ಲಿ ಆಹಾರ ಕಿಟ್ ವಿತರಣೆ ವೇಳೆ ಮಾಧ್ಯಮ  ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. “ನನ್ನ ಹೇಳಿಕೆ ಸಾಕಷ್ಟು ಸುದ್ದಿಯಾಗಿದೆ. ನಾನು ಮುಖ್ಯಮಂತ್ರಿ ಬಗ್ಗೆ ಮಾತನಾಡುವುದಿಲ್ಲ. ಅವರ ಬಗ್ಗೆ ನಾನು ಯಾವತ್ತು ಹಾರ್ಡ್ ಅಗಿ ಮಾತನಾಡಿಲ್ಲ, ಯಾವತ್ತಿಗೂ ಸಾಫ್ಟ್ ಇದ್ದೇನೆ. ಮುಖ್ಯಮಂತ್ರಿಗಳ ಬಗ್ಗೆ ನನ್ನಲ್ಲಿ ಮಾತನಾಡಿ ಯಾವುದೇ ಗೊಂದಲಕ್ಕೆ ಸಿಲುಕಿಸ ಬೇಡಿ ಎಂದು ಅವರು ಮನವಿ ಮಾಡಿದರು.

ಇದನ್ನೂ ಓದಿ:ಯಾವಾಗ ಕೇಳುತ್ತಾರೋ ಆಗ ರಾಜೀನಾಮೆ ಕೊಟ್ಟು ಹೋಗುತ್ತೇನೆ: ನಾಯಕತ್ವ ಬದಲಾವಣೆ ವಿಚಾರಕ್ಕೆ ಸಿಎಂ

ಬಿಜೆಪಿ ಪಕ್ಷಕ್ಕೆ ಯಡಿಯೂರಪ್ಪ ನವರೇ ನಾಯಕರು. ನಾನು ಅವರ ಬಗ್ಗೆ ಹಿಂದೆಯೂ ಮಾತನಾಡಿಲ್ಲ, ಈಗಲೂ ಮಾತನಾಡಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ಹೈಕಮಾಂಡ್  ರಾಜೀನಾಮೆ ಕೇಳಿದರೆ ಕೊಡಬೇಕಾಗುತ್ತೆ ಎಂದು ಪ್ರಶ್ನೆ ಯೊಂದಕ್ಕೆ ಪ್ರತಿಕ್ರಿಸಿದರು.

ವಿರೋಧ ಪಕ್ಷಗಳು ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿಲ್ಲ. ವಿರೋಧ ಪಕ್ಷಗಳು ನಮ್ಮ ಪಕ್ಷದವರ ಜೊತೆಯಲ್ಲಿ ಚೆನ್ನಾಗಿ ಇದ್ದಾರೆ. ಹಾಗಾಗಿ ನಾವೇ ವಿರೋಧ ಪಕ್ಷವಾಗಿ ಕೆಲಸ ಮಾಡುವ ಸಂದರ್ಭ ಬಂತು ಎಂದು ಯೋಗೇಶ್ವರ್ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next