Advertisement

ಒಳಚರಂಡಿ ಯೋಜನೆ ಮಾಹಿತಿ ನೀಡದಿದ್ದಲ್ಲಿ ಪ್ರತಿಭಟನಾ ಸಭೆ

12:48 PM Feb 25, 2017 | Team Udayavani |

ಕುಂದಾಪುರ: ಕುಂದಾಪುರದಲ್ಲಿ ಇದೀಗ ನಡೆಯುತ್ತಿರುವ ಒಳಚರಂಡಿ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಹಾಗೂ ಯೋಜನೆಯ ಕಾಮಗಾರಿಯ ನಿರ್ವಹಣೆ, ಗುಣಮಟ್ಟದ ಬಗ್ಗೆ ಪುರಸಭೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಜಲಮಂಡಳಿಯ ಅಧಿಕಾರಿಗಳು ಹಾಗೂ ಸಾರ್ವಜನಿಕ ಸಭೆಯನ್ನು ಹತ್ತು ದಿನದೊಳಗೆ ಕರೆಯಬೇಕೆಂದು ಮನವಿ ಮಾಡಿದ್ದರೂ ತನಕ ಸಭೆ ಕರೆಯದೇ  ಮನವಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ   ಈ ತಿಂಗಳ ಅಂತ್ಯದ ಒಳಗೆ ಸಭೆಯನ್ನು ಕರೆಯದೇ ಇದ್ದಲ್ಲಿ  ಮಾ. 3ರಂದು  ಪುರಸಭೆಯ ಎದುರು ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ಕುಂದಾಪುರದ ಪ್ರಜಾ ಜಾಗೃತಿ ವೇದಿಕೆ ಪ್ರಕಟನೆಯಲ್ಲಿ ತಿಳಿಸಿದೆ.

Advertisement

ಈ ಕುರಿತು  ಕುಂದಾಪುರ ಪುರಸಭೆಯ ಅಧ್ಯಕ್ಷರಿಗೆ ಸಮಿತಿಯ ಸದಸ್ಯರು ಮನವಿಯನ್ನು ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next