Advertisement

ಸುಗ್ರೀವಾಜ್ಞೆ ರಾಷ್ಟ್ರಪತಿಗೆ ರವಾನೆ?

08:58 PM Nov 13, 2022 | Team Udayavani |

ತಿರುವನಂತಪುರ: ಕೇರಳ ಸರ್ಕಾರ ವಿವಿಗಳ ಕುಲಾಧಿಪತಿ ಹುದ್ದೆಯಿಂದ ತಮ್ಮನ್ನು ತೆಗೆದು ಹಾಕುವ ನಿಟ್ಟಿನಲ್ಲಿ ಸಿದ್ಧಪಡಿಸಿ ಕಳುಹಿಸುವ ಸುಗ್ರೀವಾಜ್ಞೆಯ ಬಗ್ಗೆ ನಿರ್ಧಾರ ಕೈಗೊಳ್ಳುವಲ್ಲಿ ವಿಳಂಬ ಮಾಡುವುದಿಲ್ಲ. ನನ್ನನ್ನು ಗುರಿಯಾಗಿಸಿಕೊಂಡೇ ಅದನ್ನು ಕಳುಹಿಸಿದ್ದರೆ, ನಾನದನ್ನು ನೇರವಾಗಿ ರಾಷ್ಟ್ರಪತಿಗಳಿಗೆ ಕಳುಹಿಸುತ್ತೇನೆ ಎಂದು ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌ ಹೇಳಿದ್ದಾರೆ.

Advertisement

ನವದೆಹಲಿಯಲ್ಲಿ ಮಾತನಾಡಿದ ಅವರು, ಸುಗ್ರೀವಾಜ್ಞೆಯಲ್ಲಿ ಇರುವ ಅಂಶಗಳ ಬಗ್ಗೆ ಇನ್ನಷ್ಟೇ ಅಧ್ಯಯನ ನಡೆಸಬೇಕಾಗಿದೆ ಎಂದಿದ್ದಾರೆ. ಇದೇ ವೇಳೆ, ತಿರುವನಂತಪುರದಲ್ಲಿ ಮಾತನಾಡಿದ ಅಬಕಾರಿ ಸಚಿವ ಎಂ.ಬಿ.ರಾಜೇಶ್‌, ರಾಜ್ಯಪಾಲರು ಸಂವಿಧಾನದ ಅನ್ವಯ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸ ರಾಜ್ಯ ಸರ್ಕಾರದ್ದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next