Advertisement

ಪ್ರವಾದಿ ಇಂದು ಬದುಕಿದ್ದರೆ…:ಟ್ವೀಟ್ ಮಾಡಿ ಕೆಂಗಣ್ಣಿಗೆ ಗುರಿಯಾದ ತಸ್ಲೀಮಾ ನಸ್ರಿನ್

03:07 PM Jun 11, 2022 | Team Udayavani |

ಢಾಕಾ : ಪ್ರವಾದಿ ವಿರುದ್ಧದ ಹೇಳಿಕೆ ಖಂಡಿಸಿ ಭಾರತದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ಕುರಿತು ಬಾಂಗ್ಲಾದೇಶದ ಖ್ಯಾತ ಲೇಖಕಿ ತಸ್ಲೀಮಾ ನಸ್ರಿನ್ ಟ್ವೀಟ್ ಒಂದನ್ನು ಮಾಡಿ ಮತ್ತೆ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Advertisement

”ಪ್ರವಾದಿ ಮೊಹಮ್ಮದ್ ಇಂದು ಬದುಕಿದ್ದರೆ , ಪ್ರಪಂಚದಾದ್ಯಂತದ ಮುಸ್ಲಿಂ ಮತಾಂಧರ ಹುಚ್ಚುತನವನ್ನು ಕಂಡು ಬೆಚ್ಚಿಬೀಳುತ್ತಿದ್ದರು” ಎಂದು ತಸ್ಲೀಮಾ ಟ್ವೀಟ್ ನಲ್ಲಿ ಬರೆದಿದ್ದಾರೆ.

ಹಿಜಾಬ್ ಸೇರಿದಂತೆ ಹಲವು ಇಸ್ಲಾಂ ನ ಹಲವು ವಿಚಾರಗಳನ್ನು ಬಹಿರಂಗ ವಾಗಿ ಟೀಕಿಸಿ ಈಗಾಗಲೇ ಸಾಂಪ್ರದಾಯವಾದಿಗಳ ಕೆಂಗಣ್ಣಿಗೆ ಗುರಿಯಾಗಿರುವ ತಸ್ಲೀಮಾ ಅವರ ಟ್ವೀಟ್ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಇನ್ನೊಂದೆಡೆ ಅಭಿಪ್ರಾಯಕ್ಕೆ ಹಲವರ ಸಮ್ಮತಿಯೂ ಸಾಮಾಜಿಕ ತಾಣದಲ್ಲಿ ದೊರಕಿದೆ.

ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ ಉಚ್ಛಾಟಿತ ನಾಯಕರಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಹಲವು ಕಡೆಗಳಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿಇಬ್ಬರು ಸಾವನ್ನಪ್ಪಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next