Advertisement

ಸಿದ್ದು ಬಿಜೆಪಿಗೆ ಬಂದ್ರೆ ಕ್ಷೇತ್ರ ಬಿಟ್ಟು ಕೊಡುವೆ: ತಿಪ್ಪಾರೆಡ್ಡಿ

10:50 PM Mar 09, 2020 | Lakshmi GovindaRaj |

ಚಿತ್ರದುರ್ಗ: ಕಾಂಗ್ರೆಸ್‌ ಪಕ್ಷದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪಕ್ಕಕ್ಕಿಡುವ ಯತ್ನ ನಡೆಯುತ್ತಿದೆ. ಹೀಗಾಗಿ ಸಿದ್ದರಾಮಯ್ಯ ಬಿಜೆಪಿಗೆ ಬಂದರೆ ನನ್ನ ಕ್ಷೇತ್ರವನ್ನೇ ಬಿಟ್ಟು ಕೊಡಲು ಸಿದ್ಧ ಎಂದು ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

Advertisement

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕೀಯದಲ್ಲಿ ಯಾರೂ ಶತ್ರುವೂ ಅಲ್ಲ, ಮಿತ್ರರೂ ಅಲ್ಲ. ಆದ್ದರಿಂದ ಸಿದ್ದರಾ ಮಯ್ಯ ಬಿಜೆಪಿಗೆ ಬರುವುದಾದರೆ ನನ್ನ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಿ. ಯಾರನ್ನೋ ಮೆಚ್ಚಿಸಲು ಮತ್ತೂಬ್ಬರ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ.

ಇದು ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ಘನತೆ ಮತ್ತು ಗೌರವಕ್ಕೆ ಚ್ಯುತಿ ತರುತ್ತದೆ. ಅವರ ಹೇಳಿಕೆ ಆಶ್ಚರ್ಯ ಮೂಡಿಸಿದೆ. ವಿಧಾನಸಭೆಯಲ್ಲಿ ಜನಪ್ರತಿನಿಧಿಗಳು ಹಾಗೂ ಸಂವಿಧಾನದ ಬಗ್ಗೆ ಚೆನ್ನಾಗಿ ಮಾತನಾಡುತ್ತಾರೆ. ಆದರೆ ಹೊರಗೆ ಪ್ರಧಾನಿ ಮೋದಿ ಅವರನ್ನು ಒದ್ದು ಓಡಿಸಿ ಎಂಬರ್ಥದಲ್ಲಿ ಮಾತನಾಡಿರುವುದು ಅವರ ನಡೆ ಮತ್ತು ನುಡಿಯಲ್ಲಿರುವ ವ್ಯತ್ಯಾಸ ಸೂಚಿಸುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next