Advertisement

ಸುಮಲತಾ ಪರ ಕಾಂಗ್ರೆಸ್‌ ಧ್ವಜ ಹಿಡಿದರೆ ಕ್ರಮ: ದಿನೇಶ್‌

03:16 AM Apr 04, 2019 | Team Udayavani |

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಜೊತೆಗೆ ಕಾಂಗ್ರೆಸ್‌ ಧ್ವಜ ಹಿಡಿದುಕೊಂಡು ಪ್ರಚಾರ ನಡೆಸಿದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

Advertisement

ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರ ರಾತ್ರಿ ಮಂಡ್ಯ ಜಿಲ್ಲಾ ಮುಖಂಡರ ಜೊತೆ ಸಭೆ ನಡೆಸಲಾಗಿದ್ದು, ಎಲ್ಲರೂ ಮೈತ್ರಿ ಅಭ್ಯರ್ಥಿ ನಿಖೀಲ್‌ ಕುಮಾರಸ್ವಾಮಿ ಪರವಾಗಿ ಕೆಲಸ ಮಾಡಲಿದ್ದಾರೆ. ಎಲ್ಲ ಸಮಸ್ಯೆಗಳು ಬಗೆ ಹರಿದಿವೆ ಎಂದು ಹೇಳಿದರು.

ಮಂಡ್ಯ ಪಕ್ಷೇತರ ಅಭ್ಯರ್ಥಿ ಕೂಡ ಕಾಂಗ್ರೆಸ್‌ ಧ್ವಜ ಬಳಸಿದರೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು. ಪಕ್ಷದ ಕಾರ್ಯಕರ್ತರು, ಅವರ ಪರವಾಗಿ ಚುನಾವಣೆಯಲ್ಲಿ ಪಾಲ್ಗೊಳ್ಳುವವರು ಪಕ್ಷ ತ್ಯಜಿಸಿ ಹೋಗಬೇಕು. ಒಂದು ವೇಳೆ ಪಕ್ಷದ ಶಿಸ್ತು ಉಲ್ಲಂ ಸಿದರೆ, ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮಂಡ್ಯ, ಮೈಸೂರು ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ವರಿಷ್ಠ ದೇವೇಗೌಡರು ಜಂಟಿ ಪ್ರಚಾರ ಕೈಗೊಳ್ಳಲಿದ್ದಾರೆ. ಜೆಡಿಎಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲೇಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಪಕ್ಷದ ಆದೇಶ ಉಲ್ಲಂ ಸುವುದನ್ನು ಸಹಿಸುವುದಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next