Advertisement

“ಬಸ್‌ ಪ್ರಯಾಣ ದರ ಏರಿಸಿದರೆ ಹೋರಾಟ’ 

06:55 AM Oct 05, 2018 | Team Udayavani |

ಬೆಂಗಳೂರು: ಒಂದೊಮ್ಮೆ ರಾಜ್ಯ ಸರ್ಕಾರ ಬಸ್‌ ಪ್ರಯಾಣ ದರ ಏರಿಸಿದರೆ ಬೀದಿಗಿಳಿದು ಉಗ್ರ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್‌ ಸದಸ್ಯ ಎನ್‌. ರವಿಕುಮಾರ್‌ ಎಚ್ಚರಿಸಿದ್ದಾರೆ.

Advertisement

ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸ್‌ ಪ್ರಯಾಣ ದರ ಯಾವುದೇ ಕಾರಣಕ್ಕೂ ಹೆಚ್ಚಳ ಮಾಡಬಾರದು. ಆ ಪ್ರಸ್ತಾವನೆಯನ್ನೇ ಕೈ ಬಿಡಬೇಕೆಂದು ಒತ್ತಾಯಿಸಿದರು. ರಾಜ್ಯ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ 2 ರೂ. ಸೆಸ್‌ ಹಾಕಿ ನಂತರ ದರ ಸೆಸ್‌ ಕಡಿಮೆ ಮಾಡುವ ನಾಟಕ ಆಡಲಾಯಿತು. ಬಡವರು, ಮಧ್ಯಮ ವರ್ಗದವರ ಬಗ್ಗೆ ಸಮ್ಮಿಶ್ರ ಸರ್ಕಾರಕ್ಕೆ ಕಾಳಜಿಯಿಲ್ಲ. ಪೆಟ್ರೋಲ್‌, ಡೀಸೆಲ್‌ ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ನಮ್ಮ ಆಕ್ಷೇಪವಿಲ್ಲ.

ಜಿಎಸ್‌ಟಿ ಮಂಡಳಿಯಲ್ಲಿ ಎಲ್ಲ ರಾಜ್ಯದ ಪ್ರತಿನಿಧಿಗಳು ಇರುವುದರಿಂದ ಮಂಡಳಿಯ ಸಭೆಯಲ್ಲಿ ಈ ಸಂಬಂಧ ನಿರ್ಧಾರ ತೆಗೆದುಕೊಳ್ಳಲಿ ಎಂದರು. ಶಾಸಕ ರಾಮದಾಸ್‌ ಸುದ್ದಿಗೋಷ್ಠಿಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next