Advertisement

ಸಂಪುಟ ವಿಸ್ತರಣೆಯಾದರೆ ಪ್ರಳಯವಾಗಲ್ಲ: ಡಿಸಿಎಂ

11:11 PM Jan 21, 2020 | Team Udayavani |

ಮೈಸೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದರೆ ಜಗತ್ತಿನಲ್ಲಿ ಪ್ರಳಯ ಆಗಿ ಬಿಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ. ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರದಲ್ಲಿ ಸ್ಫೋಟವಾಗುತ್ತೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಅವರು, ಸಚಿವ ಸಂಪುಟ ವಿಸ್ತರಣೆಯಾದರೆ ಜಗತ್ತಿನಲ್ಲಿ ಪ್ರಳಯ ಆಗಿ ಬಿಡುವುದಿಲ್ಲ.

Advertisement

ಸಂಪುಟ ವಿಸ್ತರಣೆ ಆಗೇ ಆಗುತ್ತೆ. ಯಾವಾಗ ವಿಸ್ತರಣೆ ಮಾಡಬೇಕು ಎಂಬುದನ್ನು ನಮ್ಮ ನಾಯಕರು ನಿರ್ಧರಿಸುತ್ತಾರೆ. ಆದರೆ, ಸಿದ್ದರಾಮಯ್ಯ ಹೇಳುವಂತೆ ಯಾವ ಸ್ಫೋಟವೂ ಆಗುವುದಿಲ್ಲ. ಸಿದ್ದರಾಮಯ್ಯ ಸ್ಫೋಟ ಆಗುತ್ತೆ ಎಂಬ ಭ್ರಮೆಯಲ್ಲಿದ್ದಾರೆ ಎಂದರು. ಉಪ ಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಸೂಕ್ತ ಸ್ಥಾನಮಾನ ನೀಡಬೇಕು ಎಂಬುದು ನನ್ನ ಅಭಿಪ್ರಾಯ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಭಿನ್ನಾಭಿಪ್ರಾಯವೂ ಇಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next