Advertisement

6 ತಿಂಗಳೋಳಗೆ ಜಮೀನು ವಾಪಸ್ ನೀಡದಿದ್ದರೆ ನಾನೇ ಕುಂಟೆ ಹೊಡೆಯುತ್ತೇನೆ: ಶಾಸಕ ತುಕಾರಾಂ

06:44 PM Jan 06, 2023 | Team Udayavani |

ಕುರುಗೋಡು : 6 ತಿಂಗಳ ಒಳಗೆ ರೈತರ ಜಮೀನುಗಳನ್ನು ವಾಪಸ್ಸು ನೀಡದಿದ್ದಲ್ಲಿ ಸ್ವತ ನಾನೆ ನಿಮ್ಮ ಮುಂದೆ ನಿಂತು ಮಡಿಕೆ ಹೊಡೆಯುತ್ತೇನೆ ಎಂದು ಶಾಸಕ ಈ ತುಕಾರಾಂ ರೈತರಿಗೆ ಭರವಸೆ ನೀಡಿದರು.

Advertisement

ಸಮೀಪದ ಕುಡತಿನಿ ಪಟ್ಟಣದಲ್ಲಿ ರೈತರ ಜಮೀನುಗಳನ್ನು ಕಾರ್ಖಾನೆಗಳ ಮಾಲೀಕರು ವಶಪಡಿಸಿಕೊಂಡ ನಿಟ್ಟಿನಲ್ಲಿ ಭೂಮಿ ಕಳೆದುಕೊಂಡ ಸಂತ್ರಸ್ತರು ಮತ್ತು ವಿವಿಧ ಸಂಘಟನೆ ಮುಖಂಡರು ಹಾಗೂ ಪಟ್ಟಣದ ಸಾರ್ವಜನಿಕರು ಸುಮಾರು 20 ದಿನಗಳಿಂದ ನಿರಂತರವಾಗಿ ನಡೆಯುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕುಡತಿನಿ ಪಟ್ಟಣ ಸೇರಿ ಸುತ್ತಮುತ್ತಲಿನ ವಿವಿಧ ಭಾಗದಲ್ಲಿ ಸುಮಾರು ವರ್ಷಗಳಿಂದ ಕಾರ್ಖಾನೆಗಳು ರೈತರ ಜಮೀನುಗಳನ್ನು ವಶಪಡಿಸಿಕೊಂಡಿವೆ. ಆದರೆ ಕಾರ್ಖಾನೆಗಳು ಪ್ರಾರಂಭವಾಗದೆ, ಸ್ಥಳೀಯರಿಗೆ ಉದ್ಯೋಗ ನೀಡದೆ ಮೋಸ ಎಸಗಿವೆ ಎಂದರು.

ಅಲ್ಲದೆ ಕಾರ್ಖಾನೆ ಅಭಿವೃದ್ಧಿಯ ಹೆಸರಲ್ಲಿ ರೈತರಿಂದ ಜಮೀನುಗಳನ್ನು ವಶಪಡಿಸಿಕೊಂಡು 12 ವರ್ಷ ಗಳಾಗಿವೆ. ಇದುವರೆಗೂ ಕಾರ್ಖಾನೆ ಸ್ಥಾಪನೆಗೊಂಡಿಲ್ಲ. ಕೆಲ ಕಂಪನಿಯವರು ವಶಪಡಿಸಿಕೊಂಡ ಜಮೀನನ್ನು ಅಕ್ರಮವಾಗಿ ಹೆಚ್ಚಿನ ದರಕ್ಕೆ ಬೇರೇ ಕಂಪನಿಗೆ ಮಾರಾಟ ಮಾಡಿ ರೈತರಿಗೆ ಹಾಗೂ ಸರಕಾರಕ್ಕೆ ದ್ರೋಹವೆಸಗಿದ್ದಾರೆ. ಈ ವಿಷಯವನ್ನು ಈಗಾಗಲೇ ಕಳೆದ ತಿಂಗಳ ನಡೆದ ವಿಧಾನಸಭಾ ಸಭೆಯಲ್ಲಿ ಮುಖ್ಯಮಂತ್ರಿಗಳ ಮುಂದೆ ಪ್ರಸ್ತಾಪಿಸಿದ್ದೇನೆ 6 ತಿಂಗಳ ಒಳಗೆ ರೈತರ ಜಮೀನು ಗಳನ್ನು ವಾಪಸ್ಸು ನೀಡುವುದಾಗಿ ತಿಳಿಸಿದ್ದಾರೆ.
ಒಂದು ವೇಳೆ ವಾಪಸ್ ನೀಡದಿದ್ದಾರೆ ನಿಮ್ಮ ಹೋರಾಟಕ್ಕೆ ನನ್ನ ಬೆಂಬಲ ನೀಡಿ, ನಿಮ್ಮೊಂದಿಗೆ ನಿಮ್ಮ ಜಮೀನುಗಳಲ್ಲಿ ಮಡಿಕೆ ಹೊಡಿಯುತ್ತೇನೆ ಎಂದು ಖಡಕ್ ಹಾಗಿ ಮಾತನಾಡಿದರು.

ಹೋರಾಟದ ಮನೋಭಾವನೆ ಹೊಂದಿದ್ದಾರೆ ಮಾತ್ರ ಇಂತಹ ಹೋರಾಟ ಗಳು ಮಾಡುವುದಕ್ಕೆ ಸಾಧ್ಯ, ನಾನು ಕೂಡ ಮೊದಲು ಹೋರಾಟಗಳು ಮಾಡಿಕೊಂಡು ಬಂದಿದ್ದೇನೆ ಇದರಿಂದ ನಾನು 3 ಬಾರಿ ಶಾಸಕನಾಗಿದ್ದೇನೆ ಇದು ಸಾಮಾನ್ಯ ವಿಷಯವಲ್ಲ ಎಂದು ಹೋರಾಟಗಾರರ ಮುಂದೆ ಸ್ಮರಿಸಿದರು.

ಸ್ಥಳಕ್ಕೆ ಶಾಸಕ ಭೇಟಿ ನೀಡಿ ಹೋರಾಟಗಾರರಿಗೆ ಅಸ್ವಾಸನೆ ನೀಡಿದರೂ ಮಣಿಯದೆ ಪ್ರತಿಭಟನೆ ಮುಂದುವರಿಸಿದ್ದಾರೆ. ಇದೆ ವೇಳೆ ವಿವಿಧ ಸಂಘಟನೆಯ ಮುಖಂಡರು ಮಾತನಾಡಿ,ಕುಡತಿನಿ ಪಟ್ಟಣದ ಮಿತ್ತಲ್, ಉತ್ತಮ್ ಗಾಲ್ವಾ ಹಾಗೂ ಎನ್ ಎಂಡಿಸಿ ಕಂಪನಿಗಳು 2010 ರಲ್ಲಿ 13 ಸಾವಿರ ಎಕರೆ ಜಮೀನುಗಳನ್ನು ವಶಪಡಿಸಿಕೊಂಡು 12 ವರ್ಷ ಕಳೆದರೂ ಕಾರ್ಖಾನೆಗಳನ್ನು ಕಾರ್ಖಾನೆಗಳು ಪ್ರಾರಂಭವಾಗದೆ ಮತ್ತು ಉದ್ಯೋಗ ನೀಡದೇ ಹಾಗೂ ರೈತರಿಗೆ ಉಳುಮೆ ಮಾಡಲು ಮರು ಜಮೀನು ನೀಡದೆ ಅನ್ಯಾಯ ಎಸಗಿದ್ದಾರೆ.

Advertisement

ಕುಡತಿನಿ, ವೇಣಿ ವೀರಾಪುರ, ಹರಗಿನಡೋಣಿ, ಜಾನೆಕುಂಟೆ, ಕೊಳಗಲ್ಲು,ಯರಂಗಳಿ ಗ್ರಾಮಗಳ ಸಾವಿರಾರು ಕುಟುಂಬಗಳು ವಿವಿಧ ಸೌಲಭ್ಯಗಳಿಂದ ವಂಚಿತರಾಗಿ ಜಮೀನುಗಳು ಇಲ್ಲದೇ ಬದುಕು ಅಡಕತ್ತರಿಯಲ್ಲಿ ಸಿಲುಕಿ ಜೀವನ ನಿರ್ವಹಣೆ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಳಲು ತೋಡಿಕೊಂಡರು.

ಸರ್ಕಾರ ಕೂಡಲೇ ಕಾರ್ಖಾನೆಗಳನ್ನು ಸ್ಥಾಪಿಸಬೇಕು ಇಲ್ಲವೇ ನಮ್ಮ ಜಮೀನುಗಳನ್ನು ವಾಪಸ್ಸು ನೀಡಬೇಕು. ಅಲ್ಲಿಯವರೆಗೆ ಮಾಸಿಕ 25 ಸಾವಿರ ಉದ್ಯೋಗ ಭತ್ಯೆ ನೀಡಬೇಕೆಂದು ಸರ್ಕಾರಕ್ಕೆ ಮತ್ತು ಕಂಪನಿಗಳಿಗೆ ಒತ್ತಾಯಿಸಿದರು.

ಅಲ್ಲದೆ ಜಮೀನುಗಳ ರೈತರಿಗೆ ಕಾರ್ಖಾನೆ ಗಳಲ್ಲಿ ಉದ್ಯೋಗ ನೀಡುತ್ತೇವೆ ಎಂದು ಹೇಳಿ ಕಡಿಮೆ ವೆಚ್ಚದಲ್ಲಿ ಕಂಪನಿ ಮಾಲೀಕರು ರೈತರ ಜಮೀನು ಗಳನ್ನು ವಶಪಡಿಸಿಕೊಂಡು 13 ವರ್ಷಗಳು ಕಳೆದರೂ ಯಾವುದೇ ಸೌಲಭ್ಯಗಳು ದೊರೆತಿಲ್ಲ. ಕಂಪನಿಗಳು ಬಂದ್ ಆಗಿರುವುದರಿಂದ ರೈತರ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗಿವೆ, ಇದನ್ನೇ ನಂಬಿಕೊಂಡ ರೈತರು ಬೀದಿಗೆ ಬಂದಿದ್ದಾರೆ. ಒಂದು ಒತ್ತು ಊಟಕ್ಕೂ ಇಲ್ಲದೆ ಪರದಾಡುತ್ತಿದ್ದಾರೆ. ಇನ್ನೂ ಕೆಲ ರೈತರು ಇದರಿಂದ ಮೋಸ ಹೋಗಿ ಜೀವನ ನಿರ್ವಹಣೆಗೆ ಬೇರೆ ಬೇರೆ ರಾಜ್ಯಗಳಿಗೆ ವಲಸೆ ಹೋಗಿ ಜೀವನ ಮಾಡುವಂತ ಪರಿಸ್ಥಿತಿ ಬಂದೋಗಿದೆ. ಇದರ ಬಗ್ಗೆ ಅನೇಕ ವರ್ಷ ವಿವಿಧ ಸಂಘಟನೆಗಳು ಪ್ರತಿಭಟನೆ ಮಾಡಿದರು ಸರಕಾರ ಸ್ಪಂದಿಸಿದೆ ಮತ್ತು ಮಾಲೀಕರು ಇತ್ತಕಡೆ ತಲೆ ಹಾಕದೆ ಮೌನವಾಗಿದ್ದರೆ ಎಂದು ಆಕ್ರೋಶ ಹೊರಹಾಕಿದರು.

ಸುಮಾರು 20 ದಿನದಿಂದ ಪ್ರತಿಭಟನೆ ಮಾಡಿದರು ಇದಕ್ಕೆ ಯಾರು ಕೂಡ ಇತ್ತಕಡೆ ತಲೆ ಹಾಕದೆ ಇರುವುದು ದುರಂತವಾಗಿದೆ ಎಂದರು.

ಇದಕ್ಕೆ ಸಂಬಂದಿಸಿದ ಇಲಾಖೆ ಅಧಿಕಾರಿಗಳು, ಹರಿಯ ಅಧಿಕಾರಿಗಳು ಬಂದು ಸೂಕ್ತ ಭರವಸೆ ನೀಡುವವರಿಗೂ ಪ್ರತಿಭಟನೆ ಮಾತ್ರ ಹಿಂಪಡಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ವಿವಿಧ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು, ಸಾರ್ವಜನಿಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next