Advertisement

ನೋಟಿಸ್‌ಗೆ ಸ್ಪಂದಿಸದಿದ್ದರೆ ಭಿನ್ನ ಶಾಸಕರ ವಿರುದ್ಧ ಕ್ರಮ

12:30 AM Feb 05, 2019 | |

ಬೆಳಗಾವಿ: ‘ಶಾಸಕ ರಮೇಶ ಜಾರಕಿಹೊಳಿ ಸೇರಿ ನಾಲ್ವರಿಗೆ ಪಕ್ಷದಿಂದ ನೋಟಿಸ್‌ ನೀಡಲಾಗಿದ್ದು, ತಮ್ಮ ಸಮಸ್ಯೆ ಹೇಳಿಕೊಂಡರೆ ಪರಿಹಾರ ಸೂಚಿಸಲಾಗುವುದು. ಇಲ್ಲದಿದ್ದರೆ ಪಕ್ಷ ಸೂಕ್ತ ಕ್ರಮ ಕೈಗೊಳ್ಳಬಹುದು’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

Advertisement

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸಮಾಧಾನ ಇದ್ದವರು ಬಂದು ಪಕ್ಷದ ವರಿಷ್ಠರೆದುರು ಸಮಸ್ಯೆ ಹೇಳಿಕೊಳ್ಳಬೇಕು. ಅದಕ್ಕೆ ಸ್ಪಂದಿಸಿ ಪರಿಹರಿಸಲಾಗುವುದು ಎಂದು ಹೇಳಿದರು. ಸಮ್ಮಿಶ್ರ ಸರಕಾರ ಸ್ಥಿರವಾಗಿದ್ದು, ಮುಖ್ಯ ಮಂತ್ರಿ ಕುಮಾರಸ್ವಾಮಿ ಅವರೇ ಬಜೆಟ್ ಮಂಡಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈಗಾಗಲೇ ಮಂಡ್ಯದಲ್ಲಿ ಜೆಡಿಎಸ್‌ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಮುಂದಿನ ಚುನಾವಣೆಯಲ್ಲಿ ಯಾರನ್ನು ನಿಲ್ಲಿಸಬೇಕೆಂಬುದು ಜೆಡಿಎಸ್‌ನವರೇ ನಿರ್ಧರಿಸಲಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next