Advertisement

BJP ರಾಜ್ಯಾಧ್ಯಕ್ಷ ಸ್ಥಾನ ಕೊಡದಿದ್ದರೆ ಮುಂದಿನ ತೀರ್ಮಾನ: ವಿ. ಸೋಮಣ್ಣ

09:13 PM Jul 16, 2023 | Team Udayavani |

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ಶ್ರಮಿಸುವೆ. ಕೊಡದೇ ಹೋದರೆ ಕಾರ್ಯಕರ್ತರ ಸಭೆ ಕರೆದು ಮುಂದಿನ ತೀರ್ಮಾನ ಪ್ರಕಟಿಸುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

Advertisement

ವಿಜಯನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಗೋವಿಂದರಾಜನಗರ ಕ್ಷೇತ್ರದ ವಾರ್ಡ್‌ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 365 ದಿನವೂ ಜನರ ನಡುವೆಯಿದ್ದು, ಜನ ಸಂಘಟನೆ ಮಾಡಿದ ಅನುಭವವಿದೆ. ಆದ್ದರಿಂದ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಮಾನ ಕೊಡಿ ಎಂದು ಕೇಳಿದ್ದೇನೆ ಎಂದರು. ಗೋವಿಂದರಾಜನಗರ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ರಾಜ್ಯದಲ್ಲೇ ಮಾದರಿ ವಿಧಾನ ಸಭಾ ಕ್ಷೇತ್ರವನ್ನಾಗಿ ರೂಪಿಸಿದ್ದೇನೆ. ಬಿಜೆಪಿಯ ಹೈಕಮಾಂಡ್‌ ಮಾತಿಗೆ ಗೌರವ ನೀಡಿ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಿದೆ. ಗೋವಿಂದರಾಜನಗರದಲ್ಲಿ ಬಿಜೆಪಿ ಸುಲಭವಾಗಿ ಗೆಲ್ಲಬಹುದಿತ್ತು. ಆದರೆ ಹಿರಿಯ ಮುಖಂಡರ ಪಕ್ಷ ವಿರೋಧಿ ಕೆಲಸದಿಂದ ನನಗೆ ಸೋಲುಂಟಾಯಿತು ಎಂದು ಅವರು ಬೇಸರ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next