Advertisement

ರೋಗಲಕ್ಷಣವಿದ್ದರೆ ತಿಳಿಸಿ, ಉಚಿತವಾಗಿ ಚಿಕಿತ್ಸೆ ನೀಡಲಾಗುವುದು: ಉಡುಪಿ ಜಿಲ್ಲಾಧಿಕಾರಿ ಮನವಿ

02:05 PM Jul 07, 2020 | keerthan |

ಉಡುಪಿ: ಕೋವಿಡ್-19 ಸೋಂಕು ಇರುವ ಸಮಯದಲ್ಲಿ ಮಳೆಗಾಲ ಬಂದಿದೆ. ಯಾವುದೇ ಜ್ವರ, ಶೀತ, ಉಸಿರಾಟ ಸಮಸ್ಯೆ ಕಂಡುಬಂದಲ್ಲಿ ಮನೆಯಲ್ಲಿಯೇ ಮದ್ದು ಮಾಡುವ ಕೆಲಸ ಮಾಡಬೇಡಿ. ನಿರ್ಲಕ್ಷ್ಯ ಮಾಡದೇ ನಮ್ಮ ಫೀವರ್ ಕ್ಲಿನಿಕ್ ಗೆ ಭೇಟಿ ನೀಡಿ. ನಾವು ಚಿಕಿತ್ಸೆ ವ್ಯವಸ್ಥೆ ಮಾಡುತ್ತೇವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ನಾಗರಿಕರಿಗೆ ಮನವಿ ಮಾಡಿದ್ದಾರೆ.

Advertisement

ಜಿಲ್ಲೆಯಲ್ಲಿ ಯಾರಿಗಾದರೂ ರೋಗ ಲಕ್ಷಣಗಳಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿ. ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳಿ. ಇಲ್ಲವಾದರೆ ನಾವೇ ಭೇಟಿ ನೀಡಿ ನಿಮ್ಮ ಸ್ವಾಬ್ ಟೆಸ್ಟ್ ಮಾಡಿಸುತ್ತೇವೆ ಎಂದು ಹೇಳಿದರು.

ನಾಗರಿಕರಿಗೆ ಯಾವುದೇ ಆತಂಕ ಬೇಡ. ಗಂಟಲು ದ್ರವ ಪರೀಕ್ಷೆಯನ್ನು ಉಚಿತವಾಗಿ ಮಾಡಿಸಲಾಗುತ್ತದೆ. ಕೋವಿಡ್ ಪಾಸಿಟಿವ್ ಕಂಡುಬಂದರೆ ಅವರ ಚಿಕಿತ್ಸೆಯನ್ನೂ ಉಚಿತವಾಗಿ ಮಾಡಲಾಗುತ್ತದೆ. ರೋಗ ಲಕ್ಷಣವಿದ್ದರೆ ಯಾವುದೇ ಹಿಂಜರಿಕೆಯಿಲ್ಲದೆ ಪರೀಕ್ಷೆ ಮಾಡಿಸಿ. ಜೀವ ರಕ್ಷಣೆಯೇ ನಮ್ಮ ಆದ್ಯತೆ ಎಂದು ಜಿಲ್ಲಾಧಿಕಾರಿಗಳು ನಾಗರಿಕರಿಗೆ ಮನವಿ ಮಾಡಿದರು.

ಮನೆಗೆ ಭೇಟಿ ನೀಡುವ ಆಶಾ ಕಾರ್ಯಕರ್ತೆಯರಿಗೆ ಸರಿಯಾದ ಮಾಹಿತಿ ನೀಡಿ ಎಂದ ಅವರು, ಕೋವಿಡ್ ಕಾರ್ಯಕರ್ತೆಯರಿಗೆ ಸನ್ಮಾನ ಮಾಡಲು ಕೆಲವು ಸಂಘಟನೆಗಳು ನಿರ್ರಿಸಿದ್ದಾರೆ. ಆದರೆ ಸನ್ಮಾನಗಳು ಈಗ ಬೇಡ. ಒಮ್ಮೆ ಸೋಂಕು ನಿಯಂತ್ರಣಕ್ಕೆ ಬರಲಿ ನಂತರ ಸನ್ಮಾನ ನಡೆಸಬಹುದು ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next