Advertisement
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು. “ಈ ಹಿಂದೆ ಹಾವೇರಿಯಲ್ಲಿ ನನ್ನ ಬಗ್ಗೆ ಅತ್ಯಂತ ಲಘು ಪದ ಬಳಸಿದರೂ ಸಹಿಸಿಕೊಂಡಿದ್ದೆ. ಈಗ ನನ್ನ ಕ್ಷೇತ್ರದಲ್ಲಿ ತಮ್ಮ ಪಕ್ಷದ ಸಮಾವೇಶದಲ್ಲಿ ನನ್ನ ಬಗ್ಗೆ ಹಗುರ ಪದ ಬಳಸಿ ಟೀಕಿಸಿದ್ದು, ನನ್ನ ತಾಳ್ಮೆ ಮೀರುತ್ತಿದೆ. ಅವರು ತಮ್ಮ ನಾಲಿಗೆಯನ್ನು ಹಿಡಿತದಲ್ಲಿ ಇರಿಸಿಕೊಳ್ಳದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.
“ನಾನು ಪ್ರತಿನಿ ಧಿಸುವ ಬಬಲೇಶ್ವರ ಕ್ಷೇತ್ರದಲ್ಲಿ ತಮ್ಮ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಡಿಯೂರಪ್ಪ ಆಧಾರ ರಹಿತವಾಗಿ ನನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರ ಬಳಿ ನನ್ನ ವಿರುದ್ಧ ಭ್ರಷ್ಟಾಚಾರದ ದಾಖಲೆಗಳಿದ್ದರೆ, ಅವರಿಗೆ ಧೈರ್ಯವಿದ್ದರೆ ಲೋಕಾಯುಕ್ತ ಸೇರಿ ಸರ್ಕಾರದ ಯಾವುದೇ ತನಿಖಾ ಸಂಸ್ಥೆಗೆ ನೀಡಲಿ. ಇಲ್ಲವೇ, ಮಾಧ್ಯಮಗಳಿಗಾದರೂ ಬಿಡುಗಡೆ ಮಾಡಲಿ’ ಎಂದು ಸವಾಲು ಎಸೆದರು.