Advertisement

ಕಾಮಗಾರಿ ಸಕಾಲಕ್ಕೆ ಮುಗಿಯದಿದ್ದರೆ ಹಣವಿಲ್ಲ

03:27 PM Dec 12, 2019 | Team Udayavani |

ಕೊಪ್ಪಳ: 2017-18ನೇ ಸಾಲಿನ ಕಾಮಗಾರಿಗಳನ್ನು ಪೂರ್ಣಗೊಳಿಸಲು ಡಿಸೆಂಬರ್‌-2019ರ ಅಂತ್ಯದವರೆಗೆ ಕಾಲಮಿತಿ ನಿಗದಿ ಪಡಿಸಲಾಗಿತ್ತು. ಆದರೆ ಇಲ್ಲಿವರೆಗೂ ಬಹುತೇಕ ಕಾಮಗಾರಿಗಳು ಅಪೂರ್ಣವಾಗಿವೆ. ಇಂತಹ ಕಾಮಗಾರಿಗಳಿಗೆ ಡಿಸೆಂಬರ್‌ ಅಂತ್ಯದವರೆಗಿನ ಪ್ರಗತಿಗೆ ಸಂಬಂ ಧಿಸಿದ ಅನುದಾನ ಮಾತ್ರ ಬಿಡುಗಡೆ ಮಾಡಲಾಗುವುದುಎಂದು ಕೆಆರ್‌ಐಡಿಎಲ್‌ ಅ ಧಿಕಾರಿಗಳಿಗೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ್‌ ಹೇಳಿದರು.

Advertisement

ನಗರದ ಜಿಪಂ ಜೆ.ಎಚ್‌. ಪಟೇಲ್‌ ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆಆರ್‌ಐಡಿಎಲ್‌ಗೆ ನೀಡಿದ 2016-17, 2017-18ನೇ ಸಾಲಿನ ಕಾಮಗಾರಿಗಳನ್ನು ಇದುವರೆಗೂ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಈ ಸಾಲಿನ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಂತಿಮವಾಗಿ ಡಿಸೆಂಬರ್‌-2019ರ ವರೆಗೆ ಕಾಲಮಿತಿ ನಿಗದಿ ಪಡಿಸಿದೆ. ಅಷ್ಟರಲ್ಲಿ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಆ ಅವಧಿವರೆಗಿನ ಕಾಮಗಾರಿ ವೆಚ್ಚವನ್ನು ಮಾತ್ರ ಮಂಡಳಿಯಿಂದ ಬಿಡುಗಡೆ ಮಾಡಲಾಗುವುದು. ಬಾಕಿ ಅನುದಾನವನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ. ಹಾಗೂ ಬಾಕಿ ಉಳಿದ ಕಾಮಗಾರಿಗೆ ಸಂಬಂಧಿಸಿದ ಅನುಷ್ಠಾನ ಏಜೆನ್ಸಿಯನ್ನೇ ನೇರ ಹೊಣೆ ಮಾಡಲಾಗುವುದು ಎಂದರು.

ಲೋಕೋಪಯೋಗಿ ಇಲಾಖೆ, ಪಂ.ರಾ.ಇಂ. ವಿಭಾಗ, ನಿರ್ಮಿತಿ ಕೇಂದ್ರಗಳಿಗೆ ಸಂಬಂ ಧಿಸಿದ 2017-18 ಮತ್ತು 2018-19ನೇ ಸಾಲಿನ ಕಾಮಗಾರಿಗಳನ್ನು ಕಡ್ಡಾಯವಾಗಿ ಡಿಸೆಂಬರ್‌ ಅಂತ್ಯಕ್ಕೆ ಪೂರ್ಣಗೊಳಿಸಬೇಕು. ವಿಶೇಷ ಕಾಮಗಾರಿ ಪ್ರಕರಣಗಳಿಗೆ ಮಾತ್ರ ಕಾಲಮಿತಿ ವಿಸ್ತರಣೆಗೆ ಅವಕಾಶವಿದ್ದು, ಅವುಗಳಿಗೆ ಸೂಕ್ತ ಕಾರಣಗಳೊಂದಿಗೆ ದಾಖಲೆ ಒದಗಿಸಬೇಕು. ಮಂಡಳಿಯ ನಿಯಮದ ಪ್ರಕಾರ ರೂ. 30 ಲಕ್ಷದವರೆಗಿನ ಕಾಮಗಾರಿಯನ್ನು 3 ತಿಂಗಳು, ರೂ. 30 ಲಕ್ಷದಿಂದ 1 ಕೋಟಿಯವರೆಗಿನ ಕಾಮಗಾರಿಗೆ 5 ತಿಂಗಳು ಹಾಗೂ ರೂ. 1 ಕೋಟಿ ಹಾಗೂ ಮೇಲ್ಪಟ್ಟ ಕಾಮಗಾರಿಗಳನ್ನು 6 ತಿಂಗಳೊಳಗೆ ಆರಂಭಿಸಬೇಕು. ಕಾಮಗಾರಿ ಬದಲಾವಣೆ ಅಥವಾ ಅನುಷ್ಠಾನ ಏಜೆನ್ಸಿಯ ಬದಲಾವಣೆಯ ಅಗತ್ಯವಿದ್ದಲ್ಲಿ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ದೊರೆತ ಒಂದು ತಿಂಗಳೊಳಗಾಗಿ ಪ್ರಸ್ತಾವನೆ ಸಲ್ಲಿಸಬೇಕು ಎಂದರು.

ಆಡಳಿತಾತ್ಮಕ ಅನುಮೋದನೆ ದೊರೆತ ವರ್ಷಗಳ ನಂತರವೂ ಬಹುತೇಕ ಕಾಮಗಾರಿಗಳು ಇನ್ನೂ ಆರಂಭವಾಗಿಲ್ಲ. ಇದು ಅಧಿಕಾರಿಗಳ ನಿರ್ಲಕ್ಷ ತನವನ್ನು ತೋರಿಸುತ್ತದೆ. ಕೆಕೆಆರ್‌ಡಿಬಿ ಅಡಿ ಬರುವ ಆರು ಜಿಲ್ಲೆಗಳಲ್ಲಿ ಪ್ರಸಕ್ತ ವರ್ಷ ಕೊಪ್ಪಳ ಜಿಲ್ಲೆಯು ಆರ್ಥಿಕ ಸಾಧನೆ ಹಾಗೂ ಭೌತಿಕ ಸಾಧನೆಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ. ಈ ಸಂಗತಿಯು ಸರ್ಕಾರದ ಗಮನಕ್ಕೂ ಬಂದಿದೆ. ಮುಂದಿನ ದಿನಗಳಲ್ಲಿ ಈ ಕುರಿತು ನಡೆಯುವ ಪ್ರಗತಿ ಪರಿಶೀಲನಾ ಸಭೆಗೆ ಎಲ್ಲ ಅನುಷ್ಠಾನ ಏಜೆನ್ಸಿಗಳ ಅಧಿ ಕಾರಿಗಳು ಹಾಜರಾಗಿ ವರದಿ ಸಲ್ಲಿಸಬೇಕು ಎಂದರು.

ಅಧಿಕಾರಿಗಳು ಕ್ರಿಯಾಶೀಲರಾಗಬೇಕು. ಸರ್ಕಾರದ ಕಾಮಗಾರಿಗಳು ಅಭಿವೃದ್ಧಿ ಉದ್ದೇಶ ಹೊಂದಿರುತ್ತವೆ. ಈ ಬಗ್ಗೆ ಸಂಬಂಧಿ ಸಿದ ಅಧಿ ಕಾರಿಗಳ ಜವಾಬ್ದಾರಿ ಹೊಂದಿರಬೇಕು. ಪ್ರಗತಿ ಪರಿಶೀಲನಾ ಸಭೆಗೆ ಬರುವಾಗ ಸಂಪೂರ್ಣ ಮಾಹಿತಿಯೊಂದಿಗೆ ಬರಬೇಕು. ಕೈಯಲ್ಲಿರುವ ಕಾಗದವನ್ನು ನೋಡಿ ಗಿಣಿಪಾಠ ಮಾಡುವುದಲ್ಲ. ನಿಮ್ಮ ಉಸ್ತುವಾರಿಯಲ್ಲಿ ನಡೆಯುವ ಕಾಮಗಾರಿಗಳ ಕುರಿತು ನಿಮಗೆ ಪೂರ್ಣ ಮಾಹಿತಿ ಇಲ್ಲವೆಂದರೆ ನೀವು ಮಾಡುತ್ತಿರುವ ಕೆಲಸವಾದರೂ ಏನು ಎಂದು ಅವರು ಅಧಿಕಾರಿಗಳಿಗೆ ಪ್ರಶ್ನಿಸಿದರು.

Advertisement

ಕೆಕೆಆರ್‌ಡಿಬಿ ಅನುದಾನದಡೆ ಜಿಲ್ಲೆಯ ವಿವಿಧೆಡೆ ನಿರ್ಮಾಣವಾಗುತ್ತಿರುವ ಬಸ್‌ನಿಲ್ದಾಣಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಬಸ್‌ ನಿಲ್ದಾಣವನ್ನು ಶೀಘ್ರ ಉದ್ಘಾಟಿಸಬೇಕು ಎಂದು ಎನ್‌ಇಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಸತಿ ಶಾಲೆಗಳ ಕಟ್ಟಡ, ಗಂಗಾವತಿಯ ಪ್ರಥಮ ದರ್ಜೆ ಕಾಲೇಜು ಕಟ್ಟಡ ಕಾಮಗಾರಿ, ಜಿಲ್ಲೆಯ ವಿವಿಧೆಡೆ ಸ್ಥಾಪಿಸಬೇಕಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಕಾಮಗಾರಿ, ಮುಂತಾದವುಗಳ ಕುರಿತು ಪ್ರಗತಿ ವರದಿ ಪರಿಶೀಲಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್‌, ಜಿಪಂ ಸಿಇಒ ರಘುನಂದನ್‌ ಮೂರ್ತಿ, ಪ್ರೊಬೇಷನರಿ ಐಎಎಸ್‌ ಅಧಿಕಾರಿ ನೇಹಾ ಜೈನ್‌ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಅನುಷ್ಠಾನ ಏಜೆನ್ಸಿಗಳ ಅಧಿ ಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next