Advertisement

ಗೌರವ ಇದ್ದರೆ ಪ್ರಸಾದ್‌ ಮನೆಗೆ ಹೋಗಬಾರದಿತ್ತು: ಆರ್‌. ಅಶೋಕ್‌

11:23 PM Apr 13, 2024 | Team Udayavani |

ಬೆಂಗಳೂರು: ಮುಖ್ಯಮಂತ್ರಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿರುವ ವಿಪಕ್ಷ ನಾಯಕ ಅಶೋಕ್‌, ಮತಕ್ಕಾಗಿ ಮರ್ಯಾದೆ ಕಳೆದುಕೊಂಡ ರಾಜಕಾರಣಿ ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯ ಮಾತ್ರ ಎಂದು ಟೀಕಿಸಿದ್ದಾರೆ.

Advertisement

ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ ಬಗ್ಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಒಬ್ಬ ವಂಚಕ, ದ್ರೋಹಿ ಎಂದು ಈ ಹಿಂದೆ ಶ್ರೀನಿವಾಸ್‌ ಪ್ರಸಾದ್‌ ಮಾತನಾಡಿದ್ದರು. ಅವರು ಸಿದ್ದರಾಮಯ್ಯ ಮನೆ ಬಾಗಿಲಿಗೆ ಇದುವರೆಗೆ ಹೋಗಿಲ್ಲ. ಆದರೆ ಸಿದ್ದರಾಮಯ್ಯ ಹೋಗಿದ್ದಾರೆ. ಮಾನ-ಮರ್ಯಾದೆ, ಗೌರವ ಇದ್ದಿದ್ದರೆ ಸಿದ್ದರಾಮಯ್ಯ ಹೋಗ ಬಾರದಿತ್ತು ಎಂದು ವ್ಯಂಗ್ಯವಾಡಿದರು.ಶ್ರೀನಿವಾಸ್‌ ಪ್ರಸಾದ್‌ ಈಗಲೂ ನಮ್ಮ ಸಂಸದರು. ಅವರ ಅಳಿಯ ಹರ್ಷವರ್ಧನ್‌ ನಮ್ಮ ಪಕ್ಷದಲ್ಲೇ ಇದ್ದಾರೆ.

ಸಿದ್ದರಾಮಯ್ಯನವರಿಗೆ ಮೈಸೂರು ಹಾಗೂ ಚಾಮರಾಜ ನಗರವನ್ನು ಗೆಲ್ಲುವ ನಂಬಿಕೆ ಇಲ್ಲ. ಸೋಲಿನ ಭೀತಿಯಿಂದ ಅವರು ಶ್ರೀನಿವಾಸ್‌ ಪ್ರಸಾದ್‌ ನಿವಾಸಕ್ಕೆ ಭೇಟಿ ಮಾಡಿದ್ದಾರೆ. ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಶ್ರೀನಿವಾಸ್‌ ಪ್ರಸಾದ್‌ ಅವರಿಗೆ ನಮ್ಮ ಪಕ್ಷದ ಮೈಸೂರು ಜಿಲ್ಲಾ ಘಟಕ ಆಹ್ವಾನ ನೀಡಿರಬಹುದು. ಆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next