Advertisement

ಮೈತ್ರಿ ಇಲ್ಲದೆ ಇದ್ದಿದ್ದರೆ 15 ಸ್ಥಾನ ಗೆಲ್ಲುತ್ತಿದ್ದೆವು: ಮೊಯ್ಲಿ

09:42 AM Jun 24, 2019 | Vishnu Das |

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳದೆ ಇದ್ದಿದ್ದರೆ 15 ರಿಂದ 16 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹೇಳಿದ್ದಾರೆ.

Advertisement

ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈತ್ರಿ ಸರ್ಕಾರ ಜನರ ಭಾವನೆಗಳಿಗೆ ಸರಿಯಾಗಿ ಸ್ಪಂದಿಸಿಲ್ಲ ಎಂದರು.

ನಾನು ಸೋತರೂ ಚಿಕ್ಕಬಳ್ಳಾಪುರದ ಜನರ ಮೇಲೆ ಪ್ರೀತಿ ವಿಶ್ವಾಸ ಮುಂದುವರಿಸುತ್ತೇನೆ. ಮುಂದೆ ಚುನಾವಣೆಗೆ ನಿಲ್ಲುತ್ತೇನೋ ಗೊತ್ತಿಲ್ಲ, ಆದರೂ ಕ್ಷೇತ್ರದ ಜನರೊಂದಿಗೆ ಇರುತ್ತೇನೆ ಎಂದರು.

ಮೈತ್ರಿ ಇಲ್ಲದೆ ಇದ್ದಿದ್ದರೆ 15 ರಿಂದ 16 ಸ್ಥಾನಗೆಲ್ಲುತ್ತಿದ್ದೆವು. ಚಿಕ್ಕಬಳ್ಳಾಪುರದಲ್ಲಿ ನನ್ನ ಸೋಲಿಗೆ ನೂರಕ್ಕೆ ನೂರರಷ್ಟು ಮೈತ್ರಿ ಕಾರಣ ಎಂದರು.

ನಮ್ಮವರಿಂದಲೂ ಮೋಸ ಆಯಿತು.ಅಧಿಕಾರದ ಆಸೆಯಿಂದ ಮೋಸ ಮಾಡಿದರು ಎಂದು ಸ್ವಪಕ್ಷೀಯರ ವಿರುದ್ಧ ಆಕ್ರೋಶ ಹೊರಹಾಕಿದರು.

Advertisement

ಮಧ್ಯಂತರ ಚುನಾವಣೆ ಕುರಿತಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಮೊಯ್ಲಿ, ಈಗ ಯಾವ ಶಾಸಕರೂ ಚುನಾವಣೆಗೆ ಹೋಗಲು ಸಿದ್ಧರಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next