ಕಾಂಗ್ರೆಸ್ನ 139ನೇ ಸಂಸ್ಥಾಪನ ದಿನದ ಹಿನ್ನೆಲೆ ಯಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿ ಆಯೋಜಿ ಸಲಾಗಿದ್ದ “ಹೈ ತಯ್ನಾರ್ ಹಮ್’ ರ್ಯಾಲಿ ಉದ್ದೇಶಿಸಿ ರಾಹುಲ್ ಮಾತನಾಡಿದರು.
Advertisement
ಈ ವೇಳೆ ಹಿಂದುಳಿದ ವರ್ಗಗಳು, ದಲಿತರು ಮತ್ತು ಬುಡಕಟ್ಟು ಜನಾಂಗದ ಜನಸಂಖ್ಯೆ ಎಷ್ಟಿದೆಯೋ ಆ ಮಟ್ಟದ ಪ್ರಾತಿನಿಧ್ಯವನ್ನು ಹಲವಾರು ಕ್ಷೇತ್ರಗಳಲ್ಲಿ ಅವರಿಗೆ ನೀಡಲಾಗಿಲ್ಲ. ಈ ಸಮಸ್ಯೆಗಳನ್ನು ಬಗೆಹರಿಸಲು ಜಾತಿಗಣತಿಯ ಅಗತ್ಯವಿದೆ. ವಿಪಕ್ಷಗಳ ಒಕ್ಕೂಟ ಅಧಿಕಾರವೇರಿದರೆ ಜಾತಿಗಣತಿಯನ್ನು ಖಂಡಿತ ಜಾರಿಗೊಳಿಸುತ್ತೇವೆ ಎಂದು ಪುನರುಚ್ಚರಿಸಿದ್ದಾರೆ.
ಮೋದಿ ಸರಕಾರದ ಅವಧಿಯಲ್ಲಿ ಬಡವರು ಮತ್ತಷ್ಟು ಬಡವರಾದರು, ಶ್ರೀಮಂತರು ಮತ್ತಷ್ಟು ಶ್ರೀಮಂತರಾದರು. ಮಣಿಪುರದಲ್ಲಿ ಅಮಾನುಷ ಕೃತ್ಯ ನಡೆದರೂ ಮೋದಿ ಅಲ್ಲಿಗೆ ಭೇಟಿ ನೀಡಲಿಲ್ಲ. ಆದರೆ ಸೂರತ್ನಲ್ಲಿ ವಜ್ರ ವ್ಯಾಪಾರದ ಕಟ್ಟಡ ಉದ್ಘಾಟನೆಗೆ ಹೋದರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ. ಇಂಡಿಯಾ ಮೈತ್ರಿ ಒಕ್ಕೂಟ ಅಧಿಕಾರಕ್ಕೆ ಬಂದರೆ ಬಡವರು ಮತ್ತು ಮಹಿಳೆಯರ ಸಶಕ್ತೀಕರಣಕ್ಕಾಗಿ ನ್ಯಾಯ್ ಯೋಜನೆಯನ್ನು ಜಾರಿಗೊಳಿಸಲು ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.