Advertisement

ಜಾತಿಗಣತಿ ವಿಚಾರದಲ್ಲಿ ಬೇಸರವಿದ್ದರೆ ರಾಜೀನಾಮೆ ಕೊಟ್ಟು ಹೊರಬರಲಿ: ಈಶ್ವರಪ್ಪ 

04:34 PM Dec 19, 2023 | Team Udayavani |

ರಾಯಚೂರು: ಜಾತಿ ಜನಗಣತಿ ವಿಚಾರದಲ್ಲಿ ಜನಪ್ರತಿನಿಧಿಗಳಿಗೆ ನಿಜವಾದ ಕಾಳಜಿ ಇದ್ದರೆ ರಾಜೀನಾಮೆ ಕೊಟ್ಟರು ಹೊರ ಬರಲಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

Advertisement

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಇಷ್ಟು ದಿನ ಆದರೂ ಯಾಕೆ ಜಾತಿಗಣತಿ ಬಿಡುಗಡೆ ಮಾಡಿಲ್ಲ ತಿಳಿಸಲಿ. ಲಿಂಗಾಯತರು, ಒಕ್ಕಲಿಗರು ವಿರೋಧ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ನಾನು ಹಿಂದುಳಿದವರ ಪರ ಎನ್ನುತ್ತಾರೆ. ಇಬ್ಬರು ರಾಜಕೀಯ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ಕೇಂದ್ರ ಸಂಪುಟದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸ್ಥಾನ ನೀಡುವುದಾದರೆ ಸ್ವಾಗತ ಮಾಡುತ್ತೇನೆ. ರೈತರ ಬಗ್ಗೆ ಎಚ್.ಡಿ.ದೇವೆಗೌಡ ಮತ್ತು ಕುಮಾರಸ್ವಾಮಿ ಅವರಿಗೆ ಸಾಕಷ್ಟು ಕಾಳಜಿ ಇದೆ ಎಂದು ಬಣ್ಣಿಸಿದರು.

ಹಿಂದು ರಾಷ್ಟ್ರ ಮಾಡುತ್ತೇವೆ ಎಂದು ಪೇಜಾವರ ಹೇಳಿರುವುದಕ್ಕೆ ಸಾಷ್ಟಾಂಗ ನಮಸ್ಕಾರ ಮಾಡುವೆ. ಅವರ ಮಾರ್ಗದರ್ಶನದಲ್ಲಿ ಹಿಂದು ರಾಷ್ಟ್ರ ನಿರ್ಮಾಣಕ್ಕೆ ನಾವು ಸಿದ್ಧರಿದ್ದೇವೆ. ಸಿದ್ದರಾಮಯ್ಯರಿಗೆ ಮುಸ್ಲಿಂ ರಾಷ್ಟ್ರ ಮಾಡುತ್ತೇವೆ ಎಂದಿದ್ದರೆ ಖುಷಿಯಾಗುತ್ತಿತ್ತು ಎಂದು ಟೀಕಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next