Advertisement

ರೈತರ ಸಾಲ ಮನ್ನಾ  ಮಾಡದಿದ್ರೆ ಪಾದಯಾತ್ರೆ: ಕುಮಾರ್‌ ಕಿಡಿ

03:45 AM Apr 07, 2017 | Harsha Rao |

ಮಂಡ್ಯ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಸಾಲ ಮನ್ನಾ ಮಾಡದಿದ್ದರೆ ರಾಜಾದ್ಯಂತ ಪಾದಯಾತ್ರೆ ಮಾಡುವುದಾಗಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

Advertisement

ತಾಲೂಕಿನ ಬಿ.ಹೊಸೂರಿನಲ್ಲಿ ಸಾಲಬಾಧೆಯಿಂದ ಆತ್ಮಹತ್ಯೆ ಶರಣಾದ ರೈತ ಹೆಚ್‌.ಜೆ.ಶಿವಣ್ಣ ಮನೆಗೆ ಗುರುವಾರ ಸಂಜೆ ಭೇಟಿ ನೀಡಿ ಅಂತಿಮ ದರ್ಶನ ಪಡೆದ ಹೆಚ್‌.ಡಿ.ಕುಮಾರ ಸ್ವಾಮಿ ಅವರು ಮೃತ ರೈತನ ಕುಟುಂಬ ವರ್ಗದವರಿಗೆ 1 ಲಕ್ಷ ರೂ. ಪರಿಹಾರ ನೀಡಿ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಾಲ
ಮನ್ನಾ ಮಾಡಲು ಮೇ ತಿಂಗಳ ಕೊನೆಯವರೆಗೆ ಗಡುವು ನೀಡುತ್ತೇನೆ. ಸಾಲ ಮನ್ನಾ ಮಾಡದಿದ್ದರೆ ರಾಜಾದ್ಯಂತ ಪಾದಯಾತ್ರೆ ಮಾಡುವೆ. ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಈ ವೇಳೆ ಪುನರುತ್ಛರಿಸಿದರು.

ನಾನು ಒಂದು ಲಕ್ಷ ರೂ. ಪರಿಹಾರ ನೀಡಿದ್ದು ದೊಡ್ಡ ಸಂಗತಿಯಲ್ಲ. ಆದರೆ, ಅವರಿಗೆ ಬದುಕು ದೊಡ್ಡದಿದೆ. ಒಬ್ಬ ಮಗಳು ಡಿಪ್ಲೊಮೋ ಮಾಡುತ್ತಿದ್ದಾರೆ. ಆಕೆಯ ವಿದ್ಯಾಭ್ಯಾಸ ಹಾಗೂ ವೃತ್ತಿಗೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ಕೊಟ್ಟಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next