Advertisement

ಗಿಣಿ ಹುಡುಕಿ ಕೊಟ್ಟರೆ 50 ಸಾವಿರ ಬಹುಮಾನ ಕೊಡ್ತೀವಿ..!

08:03 PM Jul 19, 2022 | Team Udayavani |

ತುಮಕೂರು: ಇಲ್ಲಿನ ಜಯನಗರದ ನಿವಾಸಿ ರವಿ ಕುಟುಂಬ ಪ್ರೀತಿಯಿಂದ ಸಾಕಿದ್ದ ಗಿಣಿ ಕೆಲ ದಿನಗಳಿಂದ ನಾಪತ್ತೆಯಾಗಿದ್ದು, ಕುಟುಂಬದ ಸದಸ್ಯರು ದುಃಖದಲ್ಲಿದ್ದಾರೆ.

Advertisement

ಗಿಣಿ ಪತ್ತೆ ಮಾಡಿಕೊಟ್ಟವರಿಗೆ 50 ಸಾವಿರ ರೂ. ಬಹುಮಾನ ನೀಡುವುದಾಗಿಯೂ ಘೋಷಿಸಿದ್ದಾರೆ.

ಆಫ್ರಿಕನ್‌ ಗ್ರೇ ತಳಿಯ ಎರಡು ಗಿಣಿಗಳನ್ನು ಎರಡೂವರೆ ವರ್ಷದಿಂದ ಸಾಕಲಾಗಿತ್ತು. ಈ ಪೈಕಿ ರುಸ್ತುಮಾ ಎಂಬ ಹೆಸರಿನ ಗಿಣಿ ಇದೇ 16ರಂದು ಮನೆಯಿಂದ ನಾಪತ್ತೆಯಾಗಿದ್ದು, ಕುಟುಂಬದ ಸದಸ್ಯರು ಹಗಲು ರಾತ್ರಿ ಎನ್ನದೆ ಹುಡುಕಾಟ ನಡೆಸುತ್ತಿದ್ದಾರೆ.

ಗಿಣಿ ಪತ್ತೆಯಾದರೆ ಮಾಹಿತಿ ನೀಡುವಂತೆ ನಗರದಲ್ಲಿ ಬ್ಯಾನರ್‌ ಕೂಡ ಅಳವಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ಕುಟುಂಬ ಮಾಹಿತಿ ಹಂಚಿಕೊಂಡಿದೆ.

ಅಲ್ಲದೆ, ಗಿಣಿ ಹುಡುಕಿ ಕೊಟ್ಟರೆ 50 ಸಾವಿರ ರೂ.ಬಹುಮಾನ ನೀಡುವುದಾಗಿಯೂ ಘೋಷಣೆ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next