Advertisement

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

09:56 PM Mar 25, 2024 | Team Udayavani |

ಮಂಡ್ಯ: ಕಾಂಗ್ರೆಸ್‌ ಅಭ್ಯರ್ಥಿಗೆ ಸಂಸದೆ ಸುಮಲತಾ ಬೆಂಬಲ ಕೊಡುತ್ತೇನೆ ಎಂದರೆ ನಾವು ಬೇಡ ಎನ್ನುವುದಿಲ್ಲ. ಸುಮಲತಾ ಜತೆ ರಾಜಕೀಯವಾಗಿ ನಾವು ಮಾತನಾಡಿಲ್ಲ. ಅವರ ನಿಲುವುಗಳ ಬಗ್ಗೆ ನಾನು ಯಾವತ್ತೂ ಪ್ರಶ್ನೆ ಮಾಡಿಲ್ಲ. ಅವರು ನಮಗೆ ಬೆಂಬಲ ಕೊಡುತ್ತೇನೆ ಅಂದರೆ ಕೊಡಲಿ. ನಾವು ಸ್ವಾಗತಿಸುತ್ತೇವೆ ಎಂದು ಕೃಷಿ ಸಚಿವ ಚಲವರಾಯಸ್ವಾಮಿ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರ ಮಗ ಎಚ್‌.ಡಿ.ಕುಮಾರಸ್ವಾಮಿ ರಾಜ್ಯದ ನಾಯಕ. ಎಚ್‌.ಡಿ.ಕುಮಾರಸ್ವಾಮಿ ಮಧುಗಿರಿಗೆ ಹೋದಾಗ ಇದು ನನ್ನ ಕರ್ಮಭೂಮಿ ಅಂತಾರೆ. ಅದೇ ರೀತಿ ರಾಮನಗರ, ಚನ್ನಪಟ್ಟಣವನ್ನು ಕರ್ಮಭೂಮಿ ಎನ್ನುತ್ತಾರೆ. ನಮ್ಮ ಜಿಲ್ಲೆಯ ಇತಿಹಾಸದಲ್ಲಿ ಹೊರ ಜಿಲ್ಲೆಯವರಿಗೆ ಭಾವನಾತ್ಮಕವಾಗಿ ಅವಕಾಶ ನೀಡಿಲ್ಲ. ಕುಮಾರಸ್ವಾಮಿ ರಾಮನಗರವನ್ನು ಪೂರ್ತಿ ತಿರಸ್ಕರಿಸುತ್ತಾರೋ ಅಥವಾ ಅರ್ಧಕ್ಕೆ ಬಿಟ್ಟು ಇಲ್ಲಿಗೆ ಬರುತ್ತಾರೋ ಗೊತ್ತಿಲ್ಲ. ಅಥವಾ ಕೊನೆ ಘಳಿಗೆಯಲ್ಲಿ ಬೇರೆ ಯಾರನ್ನಾದರೂ ನಿಲ್ಲಿಸುತ್ತಾರೋ ಗೊತ್ತಿಲ್ಲ ಎಂದರು.

ಮಾಜಿ ಸಚಿವ ಕೆ.ಸಿ.ನಾರಾಯಣ ಗೌಡ ಶೀಘ್ರ ಕಾಂಗ್ರೆಸ್‌ಗೆ: ಚಲುವರಾಯಸ್ವಾಮಿ
ಮಂಡ್ಯ: ಮಾಜಿ ಸಚಿವ ಕೆ.ಸಿ.ನಾರಾಯಣ ಗೌಡ ನಮ್ಮ ಸಂಪರ್ಕದಲ್ಲಿದ್ದು, ಶೀಘ್ರದಲ್ಲಿ ಕೆ.ಆರ್‌.ಪೇಟೆ ಭಾಗದ ಮುಖಂಡರೊಂದಿಗೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಕೃಷಿ ಸಚಿವ ಎನ್‌.ಚಲುವರಾಯ ಸ್ವಾಮಿ ತಿಳಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾರಾಯಣ ಗೌಡರು ಕಾಂಗ್ರೆಸ್‌ ಸೇರುವ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಯಾವುದೇ ಷರತ್ತುಗಳಿಲ್ಲದೆ ಅವರು ಶೀಘ್ರ ಕಾಂಗ್ರೆಸ್‌ ಸೇರಲಿದ್ದಾರೆ. ಪಕ್ಷ ಸೇರ್ಪಡೆಯಾದ ಬಳಿಕ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಲಾಗುವುದು ಎಂದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next