Advertisement

ಗರ್ವ ಇದ್ದರೆ ತಾನೇ ಭಂಗ ಆಗೋದು: ದೇವೇಗೌಡರಿಗೆ ಸಿದ್ದರಾಮಯ್ಯ ತಿರುಗೇಟು

11:31 PM Apr 01, 2024 | Team Udayavani |

ಮೈಸೂರು: ನನಗೆ ಗರ್ವ ಇದ್ದರೆ ತಾನೇ ಭಂಗ ಆಗುವುದು. ದೇವೇಗೌಡರು ಹೇಳಿದ್ದನ್ನು ನಾನು ಹೇಳಿದ್ದೇನೆ. ಸತ್ಯ ಹೇಳಿದ್ದಕ್ಕೆ ನನಗೆ ಗರ್ವ ಅನ್ನುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವೇಗೌಡರಿಗೆ ತಿರುಗೇಟು ನೀಡಿದರು.

Advertisement

“ಸಿದ್ದರಾಮಯ್ಯ ಅವರ ಗರ್ವಭಂಗ ವಾಗಬೇಕು’ ಎಂಬ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಹೇಳಿಕೆಗೆ ಕಿಡಿಕಾರಿದ ಸಿದ್ದರಾಮಯ್ಯ, ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದವರು ಯಾರು? ಮುಂದಿನ ಜನ್ಮ ಇದ್ದರೆ ಮುಸ್ಲಿಮನಾಗಿ ಹುಟ್ಟುತ್ತೇನೆ ಅಂದವರು ಯಾರು? ಇದನ್ನೇ ನಾನು ಹೇಳಿದ್ದಕ್ಕೆ ನನಗೆ ಗರ್ವ ಎನ್ನುತ್ತಿದ್ದಾರೆ ಎಂದರು.

ಮೋದಿ ನೇತೃತ್ವದ ಸರಕಾರದಿಂದ ದೇಶದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ಹಾಗಾಗಿ ಸಾಧನೆ ಹೆಸರಲ್ಲಿ ಮತ ಕೇಳಲು ಅವರಿಗೆ ಆಗುತ್ತಿಲ್ಲ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next