Advertisement
ರಶ್ಮಿಕಾ ಮಂದಣ್ಣ ಹೇಳಿದ್ದೇನು?ಇತ್ತೀಚೆಗೆ ಸಂದರ್ಶನವೊಂದರಲ್ಲಿ ರಶ್ಮಿಕಾ ಅವರಿಗೆ ನಿರೂಪಕರು ಕನ್ನಡದ ಯಾವ ನಟ ಮಿಸ್ಟರ್ ಶೋ ಆಫ್ ಅಂತ ನಿಮಗೆ ಅನಿಸುತ್ತದೆ ಎಂದು ಪ್ರಶ್ನೆ ಕೇಳಿದ್ದರು. ಆದರೆ ನಿರೂಪಕರು ಬಲವಂತ ಮಾಡಿದಾಗ ಕೊನೆಗೆ ಯಶ್ ಹೆಸರು ಹೇಳಿಬಿಟ್ಟಿದ್ದರು. ಇದರಿಂದ ಯಶ್ ಅಭಿಮಾನಿಗಳು ರಶ್ಮಿಕಾ ವಿರುದ್ಧ ಗರಂ ಆಗಿದ್ದು, ಯಶ್ ಬಗ್ಗೆ ಯಾರ ಸರ್ಟಿಫಿಕೆಟ್ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದ್ದರು.
ಎಲ್ಲರಿಗೂ ನಮಸ್ಕಾರ..
ಒಬ್ಬ ನಟನಾಗಿ ನಿಮ್ಮೆಲ್ಲರ ಪ್ರೀತಿ ಮತ್ತು ಅಭಿಮಾನವನ್ನು ಸಂಪಾದಿಸುವುದನ್ನೇ ಗುರಿಯಾಗಿಟ್ಟುಕೊಂಡು ಕೆಲಸ ಮಾಡುವ ನಾನು, ಕೆಲವೊಮ್ಮೆ ಎದುರಾಗುವ ಅನಗತ್ಯ ಎನಿಸುವ ವಿಷಯಗಳನ್ನು ನಿರ್ಲ್ಯಕ್ಷಿಸುವ ಸ್ವಭಾವವನ್ನು ರೂಢಿಸಿಕೊಂಡಿದ್ದೇನೆ. ಆದರೆ ನನ್ನನ್ನು ಪ್ರೀತಿಸುವ ನಿಮ್ಮ ಮನಸಿಗೆ ನೋವಾದಾಗ ಪ್ರತಿಕ್ರಿಯೆ ನೀಡದೆ ಇರುವುದು ನನ್ನಿಂದ ಸಾಧ್ಯವಿಲ್ಲ. ನಿಮ್ಮ ಅಭಿಮಾನ ಪ್ರೀತಿಗೆ ಬೆಲೆಕಟ್ಟಲಾಗುವುದಿಲ್ಲ, ಅದಕ್ಕೆ ನಾನೆಂದು ಚಿರಋಣಿ.
ರಶ್ಮಿಕಾ ಅವರು ವೈಯಕ್ತಿಕವಾಗಿ ನನಗೆ ಪರಿಚಿತರಲ್ಲ, ಇದುವರೆಗೂ ಭೇಟಿಯು ಮಾಡಿಲ್ಲ…ಮಾತು ಸಹ ಆಡಿಲ್ಲ.ಹಾಗೆಂದು ಅವರಿಗೆ ನನ್ನ ಬಗ್ಗೆ ಯಾವುದೇ ರೀತಿಯ ಆಭಿಪ್ರಾಯ ಇರಬಾರದೆಂದೇನಿಲ್ಲ. ಅವರ ಅಭಿಪ್ರಾಯ ಅವರದು, ಅದನ್ನು ಹೀಗಳೆಯುವ ಕೆಲಸ ಯಾರೂ ಮಾಡಬಾರದು. ಎಲ್ಲರ ಅಭಿಪ್ರಾಯವನ್ನು ಗೌರವಿಸೋಣ.
‘ಒಬ್ಬರ ಅಭಿಪ್ರಾಯ ಇನ್ನೊಬ್ಬರ ವ್ಯಕ್ತಿತ್ವವನ್ನು ನಿರ್ಧರಿಸುವುದಿಲ್ಲ’ ಈ ವಿಷಯ ಇಲ್ಲಿಗೆ ಬಿಟ್ಟುಬಿಡಿ, ಇಲ್ಲಿ ಚರ್ಚಿಸುವಂತದ್ದು ಏನೂ ಇಲ್ಲ! ಕೆಲವೇ ದಿನಗಳಲ್ಲಿ ”ಕೆ.ಜಿ.ಎಫ್” ಚಿತ್ರದ ಮತ್ತೊಂದು ಸ್ಟಿಲ್ ಬರಲಿದೆ. ಅಲ್ಲಿಯವರೆಗೆ ಈದ್ ಮುಬಾರಕ್. ಕ್ಷಮೆಯಾಚಿಸಿದ ರಶ್ಮಿಕಾ:
ಖಾಸಗಿ ಟಿವಿ ಚಾನೆಲ್ ವೊಂದರ ಸಂದರ್ಶನವೊಂದರಲ್ಲಿ ನಟಿ ರಶ್ಮಿಕಾ ಮಂದಣ್ಣ ಸ್ಯಾಂಡಲ್ ವುಡ್ ಸ್ಟಾರ್ ನಟ ಯಶ್ ಪರ ವ್ಯಕ್ತಪಡಿಸಿದ ಅಭಿಪ್ರಾಯ ವಿವಾದಕ್ಕೆ ಕಾರಣವಾಗಿತ್ತು. ಯಶ್ ಅಭಿಮಾನಿಗಳು ರಶ್ಮಿಕಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಯಶ್ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯೆ ನೀಡುವ ಮೂಲಕ ಅಭಿಮಾನಿಗಳು ಅಸಮಾಧಾನವ್ಯಕ್ತಪಡಿಸಬಾರದು ಎಂದು ಮನವಿ ಮಾಡಿಕೊಂಡಿದ್ದರು. ಏತನ್ಮಧ್ಯೆ ನಟಿ ರಶ್ಮಿಕಾ ಮಂದಣ್ಣ ಅವರು ನಟ ಯಶ್ ಅವರಲ್ಲಿ ಕ್ಷಮೆಯಾಚಿಸಿದ್ದಾರೆ. ಯಶ್ ಸರ್ ಬಗ್ಗೆ ಅಗೌರವ ತೋರುವುದು ನನ್ನ ಉದ್ದೇಶವಾಗಿರಲಿಲ್ಲ. ನನ್ನ ಅಭಿಪ್ರಾಯದಿಂದ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.