Advertisement

Tunga ಸೇತುವೆ ಸಮೀಪ ಅಕ್ರಮವಾಗಿ ಮದ್ಯ ಸೇವನೆ… ಇಬ್ಬರ ಮೇಲೆ ಪ್ರಕರಣ ದಾಖಲು

11:13 AM Jun 27, 2024 | Team Udayavani |

ತೀರ್ಥಹಳ್ಳಿ : ಪಟ್ಟಣದ ನೂತನ ತುಂಗಾ ಸೇತುವೆ ಸಮೀಪ ಅಕ್ರಮವಾಗಿ ಸಾರ್ವಜನಿಕರನ್ನು ಸೇರಿಸಿಕೊಂಡು ಮಧ್ಯಪಾನ ಸೇವನೆ ಮಾಡಿದ್ದಲ್ಲದೆ ಸಾರ್ವಜನಿಕರಿಗೆ ಮದ್ಯಪಾನ ಮಾಡಲು ಅನುವು ಮಾಡಿಕೊಡುತ್ತಿದ್ದ ಇಬ್ಬರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Advertisement

ಖಾಸಗಿ ಬೇಕರಿಯೊಂದರಲ್ಲಿ ಕೆಲಸ ಮಾಡುವ ಮೇಲಿನಕುರುವಳ್ಳಿಯ ನಿವಾಸಿ ವಿಕಾಸ್ (21) ವರ್ಷ, ಹಾಗೂ ಚೇತನ್ (21) ವರ್ಷ ಇಬ್ಬರು ಬುಧವಾರ ಸಂಜೆ 7 ಗಂಟೆಯ ಸಮಯದಲ್ಲಿ ಹೊಸ ತುಂಗಾ ಸೇತುವೆ ಸಮೀಪ ಮದ್ಯಪಾನ ಮಾಡುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ಡಿವೈಎಸ್ ಪಿ ಗಜಾನನ ವಾಮನ ಸುತಾರ ಇವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ಪೆಕ್ಟರ್ ಶಿವನಗೌಡ ಇವರ ನೇತೃತ್ವದಲ್ಲಿ ವೀರೇಂದ್ರ ಹಾಗೂ ದೀಪಕ್ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಕ್ರಮವಾಗಿ ಮಧ್ಯ ಸೇವನೆ ಮಾಡುತ್ತಿದ್ದ ಇಬ್ಬರ ಮೇಲೆ ಕ್ರಮ ಕೈಗೊಂಡು ಪ್ರಕರಣ ದಾಖಲು ಮಾಡಿದ್ದಾರೆ.

ಇದನ್ನೂ ಓದಿ: Mangaluru: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರ ದುರಂತ ಅಂತ್ಯ

Advertisement

Udayavani is now on Telegram. Click here to join our channel and stay updated with the latest news.

Next