Advertisement

ಅಕ್ರಮ ಆಸ್ತಿ: ನಿವೃತ್ತ ಸಾರಿಗೆ ಅಧಿಕಾರಿಗೆ ಜೈಲು- ದಂಡ

06:20 PM Sep 21, 2022 | Team Udayavani |

ಬೆಳಗಾವಿ: ಅಕ್ರಮ ಆಸ್ತಿ ಸಂಪಾದಿಸಿದ್ದ ನಿವೃತ್ತ ಸಾರಿಗೆ ಅಧಿಕಾರಿಗೆ 4ನೇ ಅಧಿಕ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ, 63 ಲಕ್ಷ ರೂ. ದಂಡ ವಿ ಧಿಸಿದೆ. ಬೀದರ ಜಿಲ್ಲೆಯ ಹುಮನಾಬಾದ್‌ನ ಎಆರ್‌ಟಿಒ, ಆರ್‌ಟಿಒ ಆಗಿದ್ದ ಸದ್ಯ ನಿವೃತ್ತರಾಗಿರುವ ಪಿ.ಶಾಂತಕುಮಾರ ಪುನ್ನಸ್ವಾಮಿ ಅವರಿಗೆ ನ್ಯಾಯಾಧೀಶರಾದ ಮೋಹನ ಪ್ರಭು ಅವರು ಈ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

Advertisement

ಶಾಂತಕುಮಾರ ಅವರು ತಮ್ಮ ಸೇವಾವಧಿಯಲ್ಲಿ ಅಕ್ರಮ ಆಸ್ತಿ ಸಂಪಾದಿಸಿದ್ದರು. ಈ ಬಗ್ಗೆ ಲೋಕಾಯುಕ್ತ ಪೊಲೀಸ್‌ ನಿರೀಕ್ಷಕ ಆರ್‌.ಕೆ. ಪಾಟೀಲ 2010ರ ಮೇ 3ರಂದು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಿದ್ದರು.

ಈ ವೇಳೆ ಅಪಾರ ಪ್ರಮಾಣದಲ್ಲಿ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದರು. ನಂತರ ಪೊಲೀಸ್‌ ನಿರೀಕ್ಷಕ ಆರ್‌.ಬಿ. ಹವಾಲ್ದಾರ ಮುಂದಿನ ತನಿಖೆ ಕೈಕೊಂಡು ಒಟ್ಟು ಆಸ್ತಿಯಲ್ಲಿ 1,14,62,121 ರೂ. ಮೌಲ್ಯದ ಅಕ್ರಮ ಆಸ್ತಿ ಹೊಂದಿರುವ ಬಗ್ಗೆ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿ ಶಾಂತಕುಮಾರ ಹಾಲಿ ಬೆಳಗಾವಿ ಆಂಜನೇಯ ನಗರದ 63 ಲಕ್ಷ ರೂ. ಮೌಲ್ಯದ ಆಸ್ತಿಯನ್ನು
ಭ್ರಷ್ಟಾಚಾರದಿಂದ ಸಂಪಾದಿಸಿರುವುದನ್ನು ಪರಿಗಣಿಸಿ ತಪ್ಪಿತಸ್ಥನೆಂದು ತೀರ್ಪು ನೀಡಿ ನಾಲ್ಕು ವರ್ಷ ಕಠಿಣ ಶಿಕ್ಷೆ ಮತ್ತು 63 ಲಕ್ಷ ರೂ. ದಂಡ ವಿಧಿ ಸಿದೆ. ದಂಡದ ಹಣ ತುಂಬದಿದ್ದರೆ ಆರೋಪಿತನ ಹಾಗೂ ಆತನ ಹೆಂಡತಿ ಹೆಸರಿನಲ್ಲಿರುವ ಚರ ಮತ್ತು ಸ್ಥಿರಾಸ್ಥಿಗಳನ್ನು ಮುಟ್ಟುಗೋಲು ಹಾಕಲು ಆದೇಶಿಸಿದೆ. ಸರ್ಕಾರದ ಪರ
ವಿಶೇಷ ಸರಕಾರಿ ಅಭಿಯೋಜಕ ಪ್ರವೀಣ ಅಗಸಗಿ ವಾದ ಮಂಡಿಸಿದ್ದರು ಎಂದು ಲೋಕಾಯುಕ್ತ ಪೊಲೀಸ್‌ ಅಧೀಕ್ಷಕಿ ಯಶೋಧಾ ವಂಟಗೋಡಿ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next