Advertisement

ಪಾವಗಡ: ಕಸಾಯಿಖಾನೆಗೆ ಅಕ್ರಮ ಜಾನುವಾರು ಸಾಗಾಟ; ಇಬ್ಬರ ಬಂಧನ

03:42 PM Sep 01, 2022 | Team Udayavani |

ಪಾವಗಡ: ಆಂಧ್ರದ ಕಣೆಕಲ್ ನಿಂದ ಹಿಂದೂಪುರ ಕಸಾಯಿಖಾನೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಬಜರಂಗದಳ, ಶ್ರೀರಾಮಸೇನೆ ಕಾರ್ಯಕರ್ತರು ಬುಧವಾರ ರಾತ್ರಿ ತಡೆದು ಪೊಲೀಸರ ವಶಕ್ಕೆ ನೀಡಿದ್ದಾರೆ.

Advertisement

ವಾಹನದಲ್ಲಿ 5 ಎತ್ತುಗಳನ್ನು ಅಪಾಯಕಾರಿ ಸ್ಥಿತಿಯಲ್ಲಿ ಸಾಗಿಸಲಾಗುತ್ತಿತ್ತು.ಪ‍ಟ್ಟಣದ ತುಮಕೂರು ರಸ್ತೆಯಲ್ಲಿ ವಾಹನ ತಡೆದು ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಿಸಲಾಗಿದೆ.

ಆದಿಗೆಪಲ್ಲಿ ಭೀಮಪ್ಪ(28), ಕಣೇಕಲ್ ನ ಅಪ್ಗಾನ್ ಫಯಾಜ್(23) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ಪಾವಗಡ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next