Advertisement

ಪಡಿತರ ವಿತರಣೆಯಲ್ಲಿ ಅಕ್ರಮ: ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಭರತ್ ಶೆಟ್ಟಿ

08:17 PM May 15, 2021 | Team Udayavani |

ಮಂಗಳೂರು: ಇಲ್ಲಿನ  ಉತ್ತರ ವಿಧಾನ ಸಭಾ ಕ್ಷೇತ್ರದ ಕಾವೂರು 18 ನೇ ವಾರ್ಡಿನ ಆಕಾಶಭವನ ದಲ್ಲಿರುವ ನ್ಯಾಯ ಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆಯಲ್ಲಿ ಸಿಬ್ಬಂದಿಯು ಅಕ್ರಮ ಎಸಗಿರುವ ಕುರಿತಾಗಿ ಜನರಿಂದ ಆರೋಪ ಬಂದ ಹಿನ್ನೆಲೆಯಲ್ಲಿ ಶಾಸಕ ಭರತ್ ಶೆಟ್ಟಿಯವರು ಇಂದು ದಿಢೀರ್ ಭೇಟಿ   ನೀಡಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು.

Advertisement

ಜನರಿಗೆ ಬಂದ ಪಡಿತರದಲ್ಲಿ ಕಡಿತ ಮಾಡಿಕೊಡುತ್ತಿದ್ದು ಪ್ರಶ್ನಿಸಿದರೆ,ದರ್ಪದ ಮಾತನಾಡುತ್ತಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಜನರು ಕೋವಿಡ್ ನಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಇಂತಹ ಅಪರಾಧಗಳನ್ನು ಸಹಿಸಲು ಸಾಧ್ಯವಿಲ್ಲ. ತಪ್ಪಿತಸ್ಥರ ಮೇಲೆ ಕಠಿಣ  ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಆದೇಶಿಸಿದರು. ಸ್ಥಳೀಯ ಮನಪಾ ಸದಸ್ಯೆ ಶ್ರೀಮತಿ ಗಾಯತ್ರಿ ರಾವ್ ಜೊತೆಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next