Advertisement

ಗಡಿಪಾರು ಮಾಡಿ ಜಿಲ್ಲಾಧಿಕಾರಿ ಆದೇಶ

08:11 PM Mar 10, 2023 | Team Udayavani |

ಬಂಟ್ವಾಳ: ಹಲವಾರು ಕ್ರಿಮಿನಲ್‌ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಬಂಟ್ವಾಳ ಬಾಳ್ತಿಲದ ರೌಡಿಶೀಟರ್‌, ಕೊಲೆ ಆರೋಪಿಯನ್ನು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿಯವರು ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ನೀಡಿದ್ದಾರೆ.

Advertisement

ಬಂಟ್ವಾಳ ಬಾಳ್ತಿಲ ನಿವಾಸಿ ಇಬ್ರಾಹಿಂ ಖಲೀಲ್‌ ಗಡಿಪಾರಾದ ಆರೋಪಿಯಾಗಿದ್ದು, ಈತ ಇತ್ತೀಚೆಗೆ ಕಲ್ಲಡ್ಕದ ರೌಡಿಶೀಟರ್‌ ಚೆನ್ನ ಫಾರೂಕ್‌ ಹತ್ಯೆಯ ಪ್ರಮುಖ ಆರೋಪಿಯಾಗಿದ್ದ. ಜತೆಗೆ ಇಬ್ರಾಹಿಂ ಖಲೀಲ್‌ನ ವಿರುದ್ಧ ಕೊಲೆಯತ್ನ, ದೊಂಬಿ, ಹಲ್ಲೆ, ಹಲ್ಲೆಗೆ ಯತ್ನ, ಗಾಂಜಾ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.

ಜಿಲ್ಲೆಯ ಹಲವು ಠಾಣಾ ವ್ಯಾಪ್ತಿಯ ಅನೇಕ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಚುನಾವಣೆಯ ಸಂದರ್ಭದಲ್ಲಿ ಯಾವುದೇ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಈತನನ್ನು ಜಿಲ್ಲೆಯಿಂದ ಗಡಿಪಾರು ಆದೇಶ ಮಾಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next