Advertisement

ಹಳೇ ದಾಖಲೆ ಬಿಡುಗಡೆ ಮಾಡಿ ಪೇಚಿಗೆ ಸಿಲುಕಿದ ಈಶ್ವರಪ್ಪ, ಪುಟ್ಟಸ್ವಾಮಿ!

11:42 AM Oct 07, 2017 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರವಾಗಿ ಭೂಮಿ ಮಂಜೂರು ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆಪ್ತ, ವಿಧಾನಪರಿಷತ್ ಸದಸ್ಯ ಬಿಜೆ ಪುಟ್ಟಸ್ವಾಮಿ ಮತ್ತೆ ಹಳೆ ದಾಖಲೆ ಬಿಡುಗಡೆ ಮಾಡಿ ಪೇಚಿಗೆ ಸಿಲುಕಿದ ಪ್ರಸಂಗ ನಡೆದಿದೆ.

Advertisement

ಶನಿವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಯತೀಂದ್ರ ಸಿದ್ದರಾಮಯ್ಯ ಅವರ ಶಾಂತಲಾ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರವಾಗಿ ಭೂಮಿ ಮಂಜೂರು ಮಾಡಿರುವ ಕುರಿತು ದಾಖಲೆಯನ್ನು ಬಿಡುಗಡೆಗೊಳಿಸಿದರು. ಆದರೆ ಅದು ಕಳೆದ ಒಂದೂವರೆ ವರ್ಷದ ಹಳೆಯ ದಾಖಲೆ ಎಂಬುದು ಗಮನಕ್ಕೆ ಬರುತ್ತಿದ್ದಂತೆಯೇ ಪೇಚಿಗೆ ಸಿಲುಕಿದ ಘಟನೆ ನಡೆಯಿತು.

ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ಕೆಎಸ್ ಈಶ್ವರಪ್ಪ ಅವರು, ಹಳೇ ದಾಖಲೆ ಎಂದು ತಿಳಿಯುತ್ತಿದ್ದಂತೆಯೇ ಮೊಬೈಲ್ ನಲ್ಲಿ ಮಾತನಾಡುವಂತೆ ಹೊರಗೆ ಎದ್ದು ಹೋಗಲು ಯತ್ನಿಸಿದಾಗ, ಪುಟ್ಟಸ್ವಾಮಿ ಅವರು ಕೂತ್ಕೊಳ್ಳಿ ಸ್ವಾಮಿ ಎಲ್ಲಿಗೆ ಹೋಗ್ತೀರಾ ಎಂದು ಕೂರಿಸಿದರು.

ಇದು ಹಳೆಯ ದಾಖಲೆಯೋ, ಹೊಸ ದಾಖಲೆಯೋ ಎಂಬುದು ಮುಖ್ಯವಲ್ಲ ಎಂದು ಕೆಎಸ್ ಈಶ್ವರಪ್ಪ ಸಮಜಾಯಿಷಿ ನೀಡಿದ ಪ್ರಸಂಗ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next