Advertisement

ಅಕ್ರಮ ಗಣಿಗಾರಿಕೆ ಪ್ರಕರಣ: 49 ಮಂದಿ ಕೋರ್ಟ್‌ಗೆ ಹಾಜರು

06:35 AM Jun 29, 2018 | Team Udayavani |

ಬೆಂಗಳೂರು: ಬಳ್ಳಾರಿಯ ಅಕ್ರಮ ಗಣಿಗಾರಿಕೆ ಪ್ರಕರಣ ಕುರಿತು ಮಾಜಿ ಸಚಿವ ಜನಾರ್ದನ ರೆಡ್ಡಿ, ಶಾಸಕ ಆನಂದ್‌ ಸಿಂಗ್‌ ಸೇರಿ 49 ಮಂದಿ ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾದರು.

Advertisement

ಜೂ.28ಕ್ಕೆ ಎಲ್ಲ ಆರೋಪಿಗಳು ಖುದ್ದು ಹಾಜರಾಗುವಂತೆ ನ್ಯಾ. ಬಿ.ವಿ.ಪಾಟೀಲ್‌ ಅವರು ನೋಟಿಸ್‌ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಎಲ್ಲರೂ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದರು. ಇದೇ ವೇಳೆ, ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿರುವ ಪ್ರಕರಣ ಕೈಬಿಡುವಂತೆ ಜನಾರ್ದನ ರೆಡ್ಡಿ, ಅಲಿಖಾನ್‌ , ಸುರೇಶ್‌ ಬಾಬು ಮತ್ತು ಬಿ.ಎಲ್‌. ರಾಣಿ ಎಂಬುವರು ಜಂಟಿಯಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿರುವುದಕ್ಕೆ ತಮ್ಮ ವಿರುದ್ಧ ಯಾವುದೇ ಸೂಕ್ತ ದಾಖಲೆಗಳಿಲ್ಲ. ಸುಳ್ಳು ಆರೋಪ ಮಾಡಲಾಗಿದೆ. ಹೀಗಾಗಿ ತಮ್ಮ ವಿರುದಟಛಿ ದಾಖಲಾಗಿರುವ ಪ್ರಕರಣವನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ. ಅರ್ಜಿ ಪರಿಶೀಲಿಸಿದ ನ್ಯಾಯಾಧೀಶರು ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಅಭಿಯೋಜಕರಿಗೆ
ಸೂಚಿಸಿದರು. ಪ್ರಕರಣದ ಮುಂದಿನ ವಿಚಾರಣೆ ಜುಲೈ 11ಕ್ಕೆ ಮುಂದೂಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next