Advertisement

Illegal sand case: ತಲೆಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ

09:11 PM Oct 13, 2023 | Team Udayavani |

ಬಂಟ್ವಾಳ: ಅಕ್ರಮ ಮರಳು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

Advertisement

ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ, ಅಭಯ್ ನಾರಾಯಣ್ ಬಂಧಿತ ಆರೋಪಿಗಳು.

ಪರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ ಆರು ಮಂದಿಯ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ 2017 ರಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಆರೋಪಿಗಳಾದ ಇವರು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಊರಿಗೆ ಹೋಗಿ ತಲೆಮರೆಸಿಕೊಂಡಿದ್ದರು.

ಇದೀಗ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಬಿ.ಹಾಗೂ ಪೋಲಿಸ್ ಉಪನಿರೀಕ್ಷಕರುಗಳಾದ ಹರೀಶ್ ಎಂ.ಆರ್,ಮತ್ತು ಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಯೋಗೇಶ್ ಡಿ.ಎಲ್, ವಿಜಯಕುಮಾರ್ ಮಾಹಿತಿ ಸಂಗ್ರಹಿಸಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next