Advertisement

Illegal sand mining; ಮರಳು ಅಡ್ಡೆಗಳ ಮೇಲೆ ಜಿಲ್ಲಾಧಿಕಾರಿ ದಾಳಿ

07:38 PM Oct 27, 2023 | Team Udayavani |

ಕುಮಟಾ: ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಕುರಿತು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಇಲಾಖಾ ಅಧಿಕಾರಿಗಳ ತಂಡದೊಂದಿಗೆ ತೆರಳಿ ದಾಳಿ ನಡೆಸಿದ ಘಟನೆ ತಾಲೂಕಿನ ದೀವಗಿಯಲ್ಲಿ ನಡೆದಿದೆ.

Advertisement

ತಾಲೂಕಿನ ಹಲವೆಡೆ ನದಿ ತೀರ ಪ್ರದೇಶಗಳಲ್ಲಿ ರಾತ್ರಿ ವೇಳೆ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡಲಾಗುತ್ತಿರುವ ಕುರಿತು ದೂರುಗಳು ಹಲವು ದಿನಗಳಿಂದ ಕೇಳಿ ಬರುತ್ತಿತ್ತು.ತಾಲೂಕಿನಲ್ಲಿ ಸಿಗುವ ಮರಳು ಪಕ್ಕದ ಶಿರಸಿ, ಸಿದ್ದಾಪುರ ಭಾಗಕ್ಕೆ ಹಾಗೂ ಸ್ಥಳೀಯ ಕೆಲ ಕಟ್ಟಡ ಕಾಮಗಾರಿಗಳ ಕಾರ್ಯಕ್ಕೆ ಸಾಗಾಟ ಮಾಡಲಾಗುತ್ತಿತ್ತು.ಇನ್ನು ಅಕ್ರಮ ಮರಳುಗಾರಿಕೆ ಮಾಡುವವರು ರಾತ್ರಿ ವೇಳೆಯಲ್ಲಿ ದೋಣಿಗಳನ್ನು ಬಳಸಿ ಮರಳನ್ನು ತೆಗೆಯುತ್ತಿದ್ದು, ಬೆಳಗಾಗುವುದರೊಳಗಾಗಿ ಸಂಬಂಧಿಸಿದ ಜಾಗಕ್ಕೆ ಮರಳನ್ನು ರವಾನಿಸುತ್ತಿರುವ ಕುರಿತು ದೂರುಗಳು ಕೇಳಿಬರುತ್ತಿತ್ತು.ಜೊತೆಗೆ ಕೆಲ ಪೋಲಿಸ್ ಅಧಿಕಾರಿಗಳು ಮರಳು ದಂಧೆಕೋರರ ಬಳಿ ಹಫ್ತಾ ವಸೂಲಿ ಮಾಡಿ, ಗಾಡಿಗಳನ್ನು ಬಿಟ್ಟು ಕಳುಹಿಸಿದ ಕುರಿತು ಆರೋಪ ಕೂಡ ಸಾರ್ವಜನಿಕವಾಗಿ ವ್ಯಕ್ತವಾಗುತ್ತಿತ್ತು.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಂಬಂಧಿಸಿದ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವುಗಳ ಆಧಾರದ ಮೇಲೆ ಜಿಲ್ಲಾಧಿಕಾರಿ, ತಹಶೀಲ್ದಾರ್,ಕಂದಾಯ ನಿರೀಕ್ಷಕರು ಸೇರಿದಂತೆ ಕಂದಾಯ ಇಲಾಖಾ ಅಧಿಕಾರಿಗಳು ಹಠಾತ್ತನೆ ದಾಳಿ ನಡೆಸಿ ಮರಳು ದಿಬ್ಬಗಳನ್ನು ವಶಪಡಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next