Advertisement

Bajpe ಅಕ್ರಮ ಮರಳುಗಾರಿಕೆ : 2 ಟಿಪ್ಪರ್‌, 15 ದೋಣಿ ವಶ

10:50 PM Sep 23, 2023 | Team Udayavani |

ಬಜಪೆ: ಗುರುಪುರ (ಫ‌ಲ್ಗುಣಿ) ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗ ಮರಳನ್ನು ಟಿಪ್ಪರ್‌ ಲಾರಿಗಳಿಗೆ ತುಂಬಿಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು 2 ಟಿಪ್ಪರ್‌ ಲಾರಿ ಮತ್ತು 15 ದೋಣಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ಖಚಿತ ಮಾಹಿತಿಯ ಮೇರೆಗೆ ಶನಿವಾರ ಬೆಳಗ್ಗೆ 4 ಗಂಟೆಗೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ್ದು, ಇದನ್ನು ಗಮನಿಸಿದ ಆರೋಪಿಗಳು ಪರಾರಿಯಾದರು. ಸ್ಥಳದಲ್ಲಿದ್ದ ಟಿಪ್ಪರ್‌ ಲಾರಿ ಮತ್ತು 50 ಸಾವಿರ ರೂ. ಮೌಲ್ಯದ 15 ದೋಣಿಗಳು ಮತ್ತು ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರವಾಲ್‌ ಅವರ ಮಾರ್ಗದರ್ಶನದಂತೆ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸಿದ್ಧಾರ್ಥ ಗೋಯೆಲ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next