Advertisement

ಅಕ್ರಮ ಮರಳುಗಾರಿಕೆ ದಕ್ಕೆಗೆ ದಾಳಿ: 2 ಲಾರಿ ಸಹಿತ 3 ಮೆಟ್ರಿಕ್‌ ಟನ್‌ ಮರಳು ವಶಕ್ಕೆ

08:30 PM Sep 15, 2022 | Team Udayavani |

ಉಡುಪಿ: ಪೆರಂಪಳ್ಳಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ರಾತ್ರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ಗೌತಮ್‌ ಶಾಸ್ತ್ರಿ ಎಚ್‌. ಅವರು ದಾಳಿ ನಡೆಸಿ 2 ಲಾರಿ ಸಹಿತ 3 ಮೆಟ್ರಿಕ್‌ ಟನ್‌ ಮರಳು ವಶಕ್ಕೆ ಪಡೆದಿದ್ದಾರೆ.

Advertisement

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಂದೀಪ್‌ ಜಿ. ಯು ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ.

ಪೆರಂಪಳ್ಳಿ ಪರಿಸರ(ಸ್ವರ್ಣ ನದಿ)ದಲ್ಲಿ ಅನಧಿಕೃತವಾಗಿ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ಸಾರ್ವಜನಿಕರ ಮಾಹಿತಿ ಮೇರೆಗೆ ರಾತ್ರಿ 10ಕ್ಕೆ ದಾಳಿ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಚಾಲಕ ಯೋಗೇಶ್ವರ್‌ ಶೆಟ್ಟಿಗಾರ್‌ ಸಹಕರಿಸಿದ್ದಾರೆ. ಭೂವಿಜ್ಞಾನಿಯವರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಖನಿಜ ಸಹಿತ ವಶಪಡಿಸಿಕೊಂಡಿರುವ ವಾಹನಗಳನ್ನು ಮಣಿಪಾಲ ಪೊಲೀಸ್‌ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next