Advertisement

ವಿವಿಧೆಡೆ ಪರವಾನಿಗೆ ರಹಿತವಾಗಿ ಮರಳು ಸಾಗಾಟ: ಟಿಪ್ಪರ್‌ ವಶಕ್ಕೆ

12:49 AM Dec 21, 2022 | Team Udayavani |

ಕುಂದಾಪುರ/ಸಿದ್ದಾಪುರ: ತ್ರಾಸಿ ಗ್ರಾಮದ ಮೊವಾಡಿ ಪರಿಸರದಲ್ಲಿ ಪರವಾನಿಗೆ ರಹಿತವಾಗಿ ಮರಳು ಸಾಗಾಟ ನಡೆಸುತ್ತಿದ್ದ ಮರಳು ಸಹಿತ 2 ಟಿಪ್ಪರ್‌ ಲಾರಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

Advertisement

ಸಾರ್ವಜನಿಕರಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ದೂರು ಬಂದ ಹಿನ್ನೆಲೆಯಲ್ಲಿ ಇಲಾಖೆ ಹಿರಿಯ ಭೂವಿಜ್ಞಾನಿ ಸಂದೀಪ್‌ ಜಿ. ಯು. ಮಾರ್ಗದರ್ಶನದಲ್ಲಿ ಭೂ ವಿಜ್ಞಾನಿ ಸಂಧ್ಯಾ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಂಕರನಾರಾಯಣ ಗ್ರಾಮದ ಕೈಯಾಣಿ, ಭರತ್ಕಲ್‌, ಕ್ರೋಡಬೈಲೂರು, ಮಚ್ಚಟ್ಟು ಗ್ರಾಮದ ಹೆಮ್ಮಣ್ಣು, ಕಳಿನಜೆಡ್ಡು ವ್ಯಾಪ್ತಿಯಲ್ಲಿ ದಾಳಿ ನಡೆಸಿದರು. ಅಧಿಕಾರಿಗಳು ದಾಳಿ ನಡೆಸುವ ವೇಳೆ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ಸ್ಥಗಿತಗೊಳಿಸಿ, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next