Advertisement

Bantwal: ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

07:59 PM Jun 13, 2024 | Team Udayavani |

ಬಂಟ್ವಾಳ: ರಾ.ಹೆ.75ರ ಪಾಣೆಮಂಗಳೂರಿನಲ್ಲಿ ಜೂ. 12ರಂದು ಮಧ್ಯಾಹ್ನ ಲಾರಿಯೊಂದನ್ನು ತಡೆದು ಪರಿಶೀಲಿಸಿದಾಗ ಅಕ್ರಮ ಮರಳು ಸಾಗಾಟ ಪತ್ತೆಯಾಗಿದ್ದು, ಮರಳು ಸಹಿತ ಲಾರಿಯನ್ನು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಬಂಟ್ವಾಳ ನಗರ ಪೊಲೀಸ್‌ ಠಾಣಾ ಪಿಎಸ್‌ಐ ರಾಮಕೃಷ್ಣ ಹಾಗೂ ಸಿಬಂದಿ ತಪಾಸಣೆಗಾಗಿ ಲಾರಿಯನ್ನು ತಡೆದು ನಿಲ್ಲಿಸಿದಾಗ ಮರಳು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಈ ಕುರಿತು ಆರೋಪಿ ಚಾಲಕ ಮೊಹಮ್ಮದ್‌ ಸಫಾÌನ್‌ನನ್ನು ವಿಚಾರಿಸಿದಾಗ ವಳಚ್ಚಿಲ್‌ನ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next