Advertisement

ಗಂಗಾವತಿ : ಪಡಿತರ ಅಕ್ಕಿ ಅಕ್ರಮ ಸಾಗಾಟ : ಆಹಾರ ಇಲಾಖೆ- ಪೊಲೀಸರ ದಾಳಿ

09:15 PM Jun 23, 2021 | Team Udayavani |

ಗಂಗಾವತಿ : ಸಾರ್ವಜನಿಕ ವಿತರಣೆಗಾಗಿ ಇರುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮಿನಿ ಲಾರಿಯ ಮೇಲೆ ಆಹಾರ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದ ಪ್ರಕರಣ ತಾಲ್ಲೂಕಿನ ಚಿಕ್ಕಬೆಣಕಲ್ ನಲ್ಲಿ ಜರುಗಿದೆ.

Advertisement

ಚಿಕ್ಕಬೆಣಕಲ್ ಗ್ರಾಮದ ಬೆಟ್ಟದ ಲಿಂಗೇಶ್ವರ ದೇಗುಲದ ರಥದ ಮುಂಭಾಗದಲ್ಲಿದ್ದ ಐಷರ್ ಮಿನಿ ಲಾರಿಯನ್ನು ಆಹಾರ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಪರೀಕ್ಷೆ ಮಾಡಿದಾಗ ಸುಮಾರು 82 ಕ್ವಿಂಟಲ್ ಪಡಿತರ ಅಕ್ಕಿ ಇದರ ಮೌಲ್ಯ 1,82,000 ರೂ ಇರುತ್ತದೆ.

ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವನಾಥ, ಮಹೆಬೂಬ್ ,ರೆಹಮಾನ್ ಖಾನ್ ಇವರ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ಆಹಾರ ಇಲಾಖೆ ಅಧಿಕಾರಿಗಳು ದಾಖಲಿಸಿದ್ದಾರೆ .
ದಾಳಿಯ ಸಂದರ್ಭದಲ್ಲಿ ಗ್ರಾಮೀಣ ಪಿಎಸ್ ಐ ಜೆ. ದೊಡ್ಡಪ್ಪ ಆಹಾರ ಇಲಾಖೆಯ ದೇವರಾಜ್ ಎ.ಎಚ್ .ಬಗಲಿ ಇದ್ದರು

Advertisement

Udayavani is now on Telegram. Click here to join our channel and stay updated with the latest news.

Next