Advertisement

ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ : ಆರೋಪಿ, 23 ಲಕ್ಷ ರೂ.ಗಳ ಅಕ್ಕಿ ವಶ

07:42 PM Jun 02, 2022 | Team Udayavani |

ವಿಟ್ಲ: ಅನ್ನಭಾಗ್ಯ ಅಕ್ಕಿಯನ್ನು  ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ವಿಟ್ಲ ಪೊಲೀಸರು  ಪತ್ತೆ ಹಚ್ಚಿ, ಒಬ್ಬ ಆರೋಪಿ ಮತ್ತು ಸೊತ್ತುಗಳನ್ನು ವಶಕ್ಕೆ ಪಡೆದ ಘಟನೆ ಬೋಳಂತೂರು ಗ್ರಾಮದ ಎನ್‌.ಸಿ.ರೋಡ್‌ ಎಂಬಲ್ಲಿ ನಡೆದಿದೆ.

Advertisement

ಲಾರಿ ಚಾಲಕ ಮಡಿಕೇರಿ ಮೂಲದ ಚಂದ್ರೇಶ್‌ ಬಂಧಿತ ಆರೋಪಿ.

ಈತ ಬೋಳಂತೂರು ಸಮೀಪದ  ನಾರ್ಶ ಎಂಬಲ್ಲಿಗೆ ಸುಮಾರು 15 ಟನ್‌ ಅಕ್ಕಿಯನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದು,  ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸರ ತಂಡ ದಾಳಿ ಮಾಡಿ, ಆರೋಪಿ ಮತ್ತು 313 ಗೋಣಿಚೀಲಗಳ 15 ಟನ್‌ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಪ್ರಭಾರ ಆಹಾರ ನಿರೀಕ್ಷಕ ಪ್ರಶಾಂತ್‌ ಶೆಟ್ಟಿ ಅವರು ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದ ಲಾರಿ ಮತ್ತು ಅಕ್ಕಿಯ ಮೌಲ್ಯ 23 ಲಕ್ಷ ರೂ.ಎಂದು ಅಂದಾಜಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next