Advertisement

Urea ಅಕ್ರಮ ದಾಸ್ತಾನು: ಅಧಿಕಾರಿಗಳ ದಾಳಿ; ಆರೋಪಿಗೆ ನ್ಯಾಯಾಂಗ ಬಂಧನ

07:35 PM Aug 28, 2023 | Team Udayavani |

ಪಿರಿಯಾಪಟ್ಟಣ: ಖಚಿತ ಮಾಹಿತಿ ಮೇರೆಗೆ ತಾಲೂಕಿನ ಪಂಚವಳ್ಳಿ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಯೂರಿಯಾ ರಸಗೊಬ್ಬರವನ್ನು ತಾಲೂಕು ಆಡಳಿತ, ಕೃಷಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಜಂಟಿ ಕಾರ್ಯಾಚರಣೆಯಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಘಟನೆ ಸೋಮವಾರ ನಡೆದಿದೆ.

Advertisement

ತಾಲೂಕಿನ ಪಂಚವಳ್ಳಿ ಗ್ರಾಮದ ಸರ್ವೆ ನಂ 10 ರ ಜಮೀನಿನ ಬಾಡಿಗೆ ಸೆಡ್ ನಲ್ಲಿ ಇಂಡಸ್ರೀಯಲ್ ಯೂಸ್ ಎಂಬ ನಾಮಾಂಕಿತ ಹೊಂದಿದ ಸುಮಾರು 330 ಬ್ಯಾಗ್ ಯೂರಿಯಾ ರಸಗೊಬ್ಬರ ಹಾಗೂ 2250 ಚೀಲಗಳನ್ನು ವಿವಿಧ ಉದ್ದೇಶಗಳಿಗೆ ಮಾರಾಟ ಮಾಡಲು ಶೇಖರಿಸಿಟ್ಟಿದ್ದ ಕೇರಳ ಮೂಲದ ಲಾರಿ ಡ್ರೈವರ್ ಮೋಹೀನ್ ಅಬೂಕರ್ ಎಂಬಾತ ಸಿಕ್ಕಿಬಿದ್ದಿದ್ದು ಇದರ ಮಾಲೀಕ ಪೆರಂಬಾಡಿ ಹಂಸ ತಲೆ ಮರೆಸಿಕೊಂಡಿದ್ದು ಡ್ರೈವರ್ ಮೋಹಿನ್ ಅಬುಕರ್ ನನ್ನು ಬಂಧಿಸಿ ನ್ಯಾಯಾಲಯ ಬಂಧನಕ್ಕೆ ಒಪ್ಪಿಸಲಾಗಿದೆ.

ದಾಸ್ತಾನು, ದಾಖಲೆ ಪರಿಶೀಲನೆ:
ಖಚಿತ ದೂರನ್ನು ಆಧರಿಸಿ ದಾಳಿ ನಡೆಸಿದ ಅಧಿಕಾರಿಗಳು, ಜಮೀನಿಗೆ ಧಾವಿಸಿ ದಾಸ್ತಾನು ಮತ್ತು ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಯೂರಿಯಾ ರಸಗೊಬ್ಬರವನ್ನು ವಿವಿಧ ಉದ್ದೇಶಗಳಿಗೆ ಹೆಚ್ಚಿನ ದರಕ್ಕೆ ಮಾರಾಟ ಮಾಡಲು ಇಂಡಸ್ರೀಯಲ್ ಯೂಸ್ ಕಂಪನಿಯ ಯೂರಿಯವನ್ನು ಸಂಗ್ರಹಿಸಿ, ನೊಂದಣಿಯಾಗಿರದ ಕಂಪನಿ ಹೆಸರಿನಲ್ಲಿ ಮಾರಾಟ ಮಾಡಲು ಕಂಪನಿಗಳ ಹೆಸರನ್ನು ಅದಲು ಬದಲು ಮಾಡಿ ಮಾರಾಟ ಮಾಡಲು ತೀರ್ಮಾನಿಸಿದ್ದರು.

ಈ ವಿಷಯ ತಿಳಿದ ಕೃಷಿ ಇಲಾಖೆ ಸಹಾಯಕ ನಿರ್ದೆಶಕ ಡಾ.ವೈ.ಪ್ರಸಾದ್, ಹಾಗೂ ಸಬ್ ಇನ್ಸ್ ಪೆಕ್ಟರ್ ಪ್ರದೀಪ್ ಕುಮಾರ್ ಹಾಗೂ ಕೃಷಿ ಅಧಿಕಾರಿ ಮಹೇಶ್, ಹೀತೇಶ್ ನೇತೃತ್ವದಲ್ಲಿ ದಾಳಿ ನಡೆಸಿ, ಕೆವಲ ಅರ್ಧ ಗಂಟೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೆಚ್ಚಿನ ಬೆಲೆಗೆ ಮಾರಾಟ: ಆರೋಪಿಗಳು ಚೀಲಗಳನ್ನು ಮೈಸೂರು ಕಂಪನಿಯ ವಿಳಾಸ ನೀಡಿ ಕೇರಳದಲ್ಲಿ ಪ್ರಿಂಟ್ ಮಾಡಿಸಿ, ಯೂರಿಯಕ್ಕೆ ಹೆಚ್ಚಿನ ಬೇಡಿಕೆ ಇರುವುದರಿಂದ ರೈತರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಈ ಜಾಗವನ್ನು ಬಾಡಿಗೆ ಪಡೆದು ಕಂಪನಿ ಚೀಲಗಳನ್ನು ಬದಲಿಸಿ, ಬೇರೆಬೇರೆ ಕಂಪನಿ ಹೆಸರಿನಲ್ಲಿ ಮಾರಾಟ ಮಾಡಲು ತೀರ್ಮಾನಿಸಿದ್ದಾಗಿ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೆಚ್ಚಿನ ವಿವರಣೆಗಾಗಿ ಆರೋಪಿನ್ನು ಪೊಲೀಸ್ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಈ ಯೂರಿಯಾ ರಸಗೊಬ್ಬರವನ್ನು ಪಟ್ಟಣದ ಎಪಿಎಂಸಿ ಗೋಡೌ ನ್‌ಗೆ ಸಾಗಿಸಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next