Advertisement

Bantwal: ಮರ ಅಕ್ರಮ ಸಾಗಾಟ- ಬಂಧನ

12:37 AM Nov 24, 2023 | Team Udayavani |

ಬಂಟ್ವಾಳ: ಅಕ್ರಮ ಮರ ಸಾಗಾಟದ ಕುರಿತು ಖಚಿತ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಿದ ಬಂಟ್ವಾಳ ಅರಣ್ಯ ಇಲಾಖೆಯವರು ಪ್ರತ್ಯೇಕ ಎರಡು ಕಡೆಗಳಲ್ಲಿ ಮರಮಟ್ಟುಗಳು ಸೇರಿದಂತೆ ವಾಹನಗಳು ಹಾಗೂ ಇಬ್ಬರು ಆರೋಪಿಗಳನ್ನು ವಶಪಡಿಸಿಕೊಂಡ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕಿನ ಸಜೀಪಪಡು ಗ್ರಾಮದ ಕೋಟೆಕಣಿಯಲ್ಲಿ ನಡೆದಿದೆ.

Advertisement

ಘಟನೆಯಲ್ಲಿ 2 ಪಿಕಪ್‌ ವಾಹನಗಳು ಹಾಗೂ ವಶಪಡಿಸಿಕೊಂಡ ದಿಮ್ಮಿಗಳ ಮೌಲ್ಯ 6 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಪಿಕಪ್‌ ಮೂಲಕ ಅಕ್ರಮವಾಗಿ ವಿವಿಧ ಜಾತಿಯ ದಿಮ್ಮಿಗಳನ್ನು ಸಾಗಿಸುತ್ತಿರುವ ಕುರಿತು ಮಾಹಿತಿ ಪಡೆದ ಬಂಟ್ವಾಳ ವಲಯ ಅರಣ್ಯಾಧಿಕಾರಿ ಪ್ರಫುಲ್‌ ಶೆಟ್ಟಿ ಪಿ. ನೇತೃತ್ವದಲ್ಲಿ ದಾಳಿ ನಡೆದಿದೆ.

ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಯಶೋಧರ, ಗಸ್ತು ಅರಣ್ಯ ಪಾಲಕರಾದ ಜಿತೇಶ್‌ ಪಿ., ಶೋಭಿತ್‌, ಸ್ಮಿತಾ, ರೇಖಾ ಸಚಿನ್‌, ಅರಣ್ಯ ವೀಕ್ಷಕ ಭಾಸ್ಕರ ಹಾಗೂ ಇಲಾಖಾ ವಾಹನ ಚಾಲಕ ಜಯರಾಮ್‌ ಪಾಲ್ಗೊಂಡಿದ್ದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂತೋನಿ ಎಸ್‌. ಮರಿಯಪ್ಪ ಅವರ ನಿರ್ದೇಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್‌ ಪಿ. ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಪ್ರಫುಲ್‌ ಶೆಟ್ಟಿ ಪಿ. ಅವರು ಪ್ರಕರಣದ ಮುಂದಿನ ತನಿಖೆ ನಡೆಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next