Advertisement

ಬಕ್ರೀದ್‌ ಹಿನ್ನೆಲೆ ಅಕ್ರಮ ಗೋ ಸಾಗಾಣಿಕೆ ತಡೆಗೆ ಆದೇಶ

06:50 AM Aug 18, 2018 | |

ಬೆಂಗಳೂರು:ಆಗಸ್ಟ್‌ 22 ರಂದು ನಡೆಯುವ ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ಅಕ್ರಮವಾಗಿ ಗೋವು ಸಾಗಾಣೆ ಹಾಗೂ ವಧೆ ಮಾಡುವುದನ್ನು ತಡೆಯುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಪ್ರಾಣಿಗಳ ವಧೆ ಮಾಡುವ ಹಾಗೂ ಕಾನೂನು ಬಾಹಿರವಾಗಿ ಪ್ರಾಣಿಗಳ ಸಾಗಾಣಿಕೆ ಮಾಡುವ ಸಾಧ್ಯತೆ ಇದೆ. ಅವುಗಳನ್ನು ತಡೆಗಟ್ಟಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿಯೂ ಸರ್ಕಾರದ ಆದೇಶದಂತೆ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಪಶು ಸಂಗೋಪನಾ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next