Advertisement

ಕೊರಟಗೆರೆ: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ

03:10 PM Oct 23, 2022 | Team Udayavani |

ಕೊರಟಗೆರೆ: ಠಾಣೆಗೆ ಬಂದ ಖಚಿತ ಮಾಹಿತಿ ಆಧಾರದ ಮೇಲೆ ಚನ್ನರಾಯನದುರ್ಗ ಹೋಬಳಿಯ ಕುರಂಕೋಟೆ ಗ್ರಾಮದ ಸಿದ್ದರಾಜುರವರ ಜಮೀನಿನ ಬಳಿ ಇಸ್ಪೀಟ್ ಆಟದಲ್ಲಿ ತೊಡಗಿದ್ದವರನ್ನು ಬಂಧಿಸಿದ ಘಟನೆ ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಸಿದ್ದರಾಜು ಮತ್ತು ಇತರೆ ಏಳು ಜನ ಬಂಧಿತ ಆರೋಪಿಗಳು.

ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟ್ ಎಲೆಗಳ ಸಹಾಯದಿಂದ ಅಂದರ್ ಬಾಹರ್ ಎಂದು ಗುಂಪು ಕೂಡಿ ಕೊಂಡು ಜೂಜಾಟವಾಡುತ್ತಿದ್ದವರ ಮೇಲೆ ಶನಿವಾರ ಸಂಜೆ ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದ್ದ ಅಸಾಮಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಅಖಾಡದಲ್ಲಿದ್ದ ಇತರ ವಸ್ತುಗಳಾದ 10,140 ರೂ. ನಗದು ಹಣ, 8 ಮೊಬೈಲ್ ಪೋನ್, 6 ದ್ವಿ ಚಕ್ರ ವಾಹನ, 52 ಇಸ್ಪೀಟ್ ಎಲೆ, 1 ಪ್ಲಾಸ್ಟಿಕ್ ಪೇಪರ್ ನ್ನು ಅಮಾನತುಪಡಿಸಿಕೊಂಡಿದ್ದಾರೆ.

ಈ ಸಂಭಂದ ಕೊರಟಗೆರೆ ಪೋಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದ್ದು, ಸಿಪಿಐ ಸುರೇಶ್ ಕೆ. ಹಾಗೂ ಪಿಎಸ್ಐ ಚೇತನ್ ಕುಮಾರ್ ಜಿ. ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ದಾಳಿ ವೇಳೆಯಲ್ಲಿ ಸಿಬ್ಬಂದಿಗಳಾದ ಎಎಸ್ಐ ರಾಮಚಂದ್ರಯ್ಯ, ಧರ್ಮಪಾಲ್ ನಾಯಕ್, ಚನ್ನಮಲ್ಲಿಕಾರ್ಜುನ್, ದೊಡ್ಡಲಿಂಗಯ್ಯ ಜಗದೀಶ್, ಮಲ್ಲೇಶ್, ದಯಾನಂದ್ ಗಣೇಶ್ ಹನುಮಂತರಾಯಪ್ಪ ಇತರರು ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next