Advertisement

ನಾನು ಕ್ಷೇತ್ರದ ಮನೆ ಮಗ: ರಘು

10:48 AM May 06, 2018 | Team Udayavani |

ಬೆಂಗಳೂರು: ಸರ್‌.ಸಿ.ವಿ.ರಾಮನ್‌ನಗರದ ಬಿಜೆಪಿ ಅಭ್ಯರ್ಥಿ ಎಸ್‌.ರಘು ಶನಿವಾರ ಬೈರ ಸಂದ್ರ ಸೇರಿದಂತೆ ಕ್ಷೇತ್ರದ ವಿವಿಧೆಡೆ ಪಾದ ಯಾತ್ರೆ ನಡೆಸಿ ಮತಯಾಚನೆ ಮಾಡಿದರು.

Advertisement

ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಜತೆಗೂಡಿ ಪಾದಯಾತ್ರೆ ನಡೆಸಿದ ಅವರು, ಕ್ಷೇತ್ರದಲ್ಲಿ ಮತದಾರರಿಂದ
ಉತ್ತಮ ಸ್ಪಂದನೆ ದೊರೆತಿದ್ದು, ಮತ್ತೂಮ್ಮೆ ಆಶೀರ್ವಾದ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ನಾನು ಕ್ಷೇತ್ರದ ಮನೆ ಮಗ. ಹತ್ತು ವರ್ಷ ಶಾಸಕನಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದೇನೆ. ಮತ್ತೂಮ್ಮೆ ಆಶೀರ್ವಾದಕ್ಕೆ ಬಂದು ನಿಂತಿದ್ದೇನೆ ಎಂದು ಮನವಿ ಮಾಡಿದರು.

ಹತ್ತು ವರ್ಷಗಳಲ್ಲಿ ಕುಡಿಯುವ ನೀರು, ಶೌಚಾಲಯ, ರಸ್ತೆ, ಬಡವರಿಗೆ ಮನೆ, ಕೊಳೆಗೇರಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಕೇಂದ್ರ ಸರ್ಕಾರದ ಯೋಜನೆಗಳಡಿ ಅನುದಾನ ತಂದು ಅಭಿವೃದ್ಧಿಪಡಿಸಿದ್ದೇನೆ. ಕ್ಷೇತ್ರದ ಸಮಸ್ಯೆಗಳ ನಿವಾರಣೆಗೆ ಶ್ರಮಿಸಿದ್ದೇನೆ ಎಂದು ಹೇಳಿದರು.   

Advertisement

Udayavani is now on Telegram. Click here to join our channel and stay updated with the latest news.

Next