Advertisement

ವಿಶ್ವಾಸಮತ ಬಗ್ಗೆ ನನಗೂ ಕುತೂಹಲವಿದೆ: ಎಚ್‌.ಡಿ.ದೇವೇಗೌಡ

06:55 AM May 19, 2018 | Team Udayavani |

ಬೆಂಗಳೂರು: “ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶನಿವಾರ ವಿಶ್ವಾಸಮತ ಸಾಬೀತುಪಡಿಸುವ
ವಿಚಾರದಲ್ಲಿ ನಾನೂ ಉತ್ಸುಕನಾಗಿದ್ದೇನೆ’ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ
ಹೇಳಿದ್ದಾರೆ. 

Advertisement

ಶುಕ್ರವಾರ ತಮ್ಮ ನಿವಾಸದಲ್ಲಿ 86ನೇ ಹುಟ್ಟುಹಬ್ಬ ಆಚರಿಸಿಕೊಂಡ ವೇಳೆ ಸುದ್ದಿಗಾರರೊಂದಿಗೆ
ಮಾತನಾಡಿದ ಅವರು,”ಸಂಖ್ಯಾಬಲದ ಆಧಾರದ ಮೇಲೆ ಏನಾಗುತ್ತದೋ ಗೊತ್ತಿಲ್ಲ.ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಶ್ವಾಸಮತ ಸಾಬೀತುಪಡಿಸುವ ವಿಚಾರ ನೋಡಲು ನಾನೂ ಉತ್ಸುಕನಾಗಿದ್ದೇನೆ. ಬಹುಮತ ಸಿಕ್ಕಿದರೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಇಲ್ಲವಾದರೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ’ ಎಂದರು.

ರಾಜಕೀಯವಾಗಿ ಹೆಚ್ಚು ಮಾತನಾಡಲು ಬಯಸದ ದೇವೇಗೌಡರು, “ಇಂದು ನನ್ನ ಹುಟ್ಟುಹಬ್ಬ. ಹೀಗಾಗಿ,
ಹೆಚ್ಚೇನೂ ಮಾತನಾಡುವುದಿಲ್ಲ. ರಾಜಕೀಯವಾಗಿ ನಾಳೆ ಮಾತನಾಡೋಣ’ ಎಂದಷ್ಟೇ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next