Advertisement

ನಾನು ಸಂಕಷ್ಟದಲ್ಲಿದ್ದು, ಟಾರ್ಗೆಟ್ ಮಾಡಲಾಗುತ್ತಿದೆ

02:13 AM May 27, 2019 | Team Udayavani |

ಹುಬ್ಬಳ್ಳಿ: ‘ನಾನು ತುಂಬಾ ಸಂಕಷ್ಟದಲ್ಲಿ ಸಿಲುಕಿದ್ದೇನೆ. ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಮಠದ ವತಿಯಿಂದ ನಿರೀಕ್ಷಿತ ಕಾರ್ಯಗಳಾಗಿಲ್ಲ ಎಂದು ನನ್ನನ್ನು ಗುರಿಯಾಗಿಸಲಾಗುತ್ತಿದೆ’ ಎಂದು ಮೂರುಸಾವಿರ ಮಠದ ಜಗದ್ಗುರು ಶ್ರೀಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ನೋವು ತೋಡಿಕೊಂಡರು.

Advertisement

ಲಿಂ.ಡಾ| ಗಂಗಾಧರ ರಾಜಯೋಗೀಂದ್ರ ಸ್ವಾಮಿಗಳ 16ನೇ ಪುಣ್ಯಸ್ಮರಣೋತ್ಸವ ಹಾಗೂ ಡಾ| ಮೂಜಗಂ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಭಾವನಾತ್ಮಕವಾಗಿ ಮಾತನಾಡಿದರೆ ಮಾಧ್ಯಮಗಳಿಗೆ ಆಹಾರವಾಗುತ್ತೇನೆ. ಅದೇ ಕಾರಣಕ್ಕೆ ಮೌನವಾಗಿದ್ದೇನೆ. ಎಲ್ಲ ನೋವುಗಳನ್ನು ನುಂಗಿಕೊಂಡು ಸುಮ್ಮನಿದ್ದೇನೆ. ಲಿಂ| ಗಂಗಾಧರ ರಾಜಯೋಗೀಂದ್ರ ಸ್ವಾಮಿಗಳ ಪುಣ್ಮಸ್ಮರಣೆ ಕಾರ್ಯಕ್ರಮದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂಬ ಆಸೆ ನಮ್ಮದಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಭಕ್ತರಿಗೆ ಆಮಂತ್ರಣ ಪತ್ರಿಕೆ ಕಳಿಸಲಾಗಿದೆ. ಅಲ್ಲದೇ ಪತ್ರಿಕೆಗಳಲ್ಲಿ ಕಾರ್ಯಕ್ರಮ ಕುರಿತು ಜಾಹೀರಾತು ನೀಡಲಾಗಿದೆ. ಆದರೂ ಜನರು ಬಾರದಿದ್ದರೆ ಅದರಲ್ಲಿ ನಮ್ಮದೇನು ತಪ್ಪಿದೆ?. ಆದರೂ, ಮಠದ ಏಳ್ಗೆಗೆ ಏನೂ ಮಾಡುತ್ತಿಲ್ಲವೆಂಬಂತೆ ಬಿಂಬಿಸಲಾಗುತ್ತಿದೆ. ಭಕ್ತರೊಂದಿಗೆ ಚರ್ಚಿಸಿ ಮಠದ ಒಳಿತಿನ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next