Advertisement
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ಉತ್ತರದಿಂದ ಸದಾನಂದ ಗೌಡರು ಸ್ಪರ್ಧಿಸುವುದಿಲ್ಲ ಎಂದು ಹಾರಿಕೆ ಸುದ್ದಿ ಹಬ್ಬಿಸುತ್ತಿರುವುದು ನನ್ನ ಪ್ರಕಾರ ದೇಶದ್ರೋಹದ ಕೆಲಸ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಎಂದರೆ ನನಗೆ ಭಯವಿಲ್ಲ. ಅವರ ಬಗ್ಗೆ ಗೌರವವಿದೆ. ದೊಡ್ಡವರೊಂದಿಗೆ ಸೆಣಸಾಡಲು ಸಿದ್ಧನಿದ್ದೇನೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದನಾಗಿ, ಕೇಂದ್ರ ಸಚಿವನಾಗಿ ಐದು ವರ್ಷ ನಿರ್ವಹಿಸಿದ ಕಾರ್ಯ, ತೃಪ್ತಿ ತಂದಿದೆ. ಪಕ್ಷ ಎಲ್ಲಿ ಟಿಕೆಟ್ ನೀಡುತ್ತದೋ ಅಲ್ಲಿ ಸ್ಪರ್ಧಿಸಲು ಸಿದ್ಧನಿದ್ದೇನೆ. ಬೆಂಗಳೂರು ಉತ್ತರ ಕ್ಷೇತ್ರದಿಂದ ಹೊರಗೆ ಹೋಗುವುದಿಲ್ಲ. ಇಲ್ಲಿ ಟಿಕೆಟ್ ನೀಡದೇ ಇದ್ದರೂ, ಬಿಜೆಪಿಯನ್ನು ಗೆಲ್ಲಿಸುವ ಶಕ್ತಿ ಇದೆ ಎಂದರು.
Advertisement
ಗೌಡರ ಬಗ್ಗೆ ನನಗೆ ಭಯವಿಲ್ಲ
12:30 AM Mar 12, 2019 | |
Advertisement
Udayavani is now on Telegram. Click here to join our channel and stay updated with the latest news.